'ಬಸನಗೌಡ ಪಾಟೀಲ ಯತ್ನಾಳ ಪಕ್ಷದಿಂದ ಕೂಡಲೇ ಉಚ್ಛಾಟನೆ ಮಾಡಬೇಕು'
'Basan Gowda Patil Yatnal should be expelled from party immediately'
ಬೆಂಗಳೂರು 29 : ಪಕ್ಷ ವಿರೋಧಿ ಚಟುವಟಿಕೆ ನಡೆಸಲು ಬಸನಗೌಡ ಪಾಟೀಲ ಯತ್ನಾಳ ಅವರು ಸೋನಿಯಾ ಮತ್ತು ರಾಹುಲ್ ಗಾಂಧಿ ಅವರಿಂದ ಸುಪಾರಿ ಪಡೆದಿದ್ದಾರೆ. ಈ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಅವರನ್ನು ಪಕ್ಷದಿಂದ ಕೂಡಲೇ ಉಚ್ಛಾಟನೆ’ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರ ಬಣ ಒತ್ತಾಯಿಸಿದೆ.
ಬಿಜೆಪಿಯ 20ಕ್ಕೂ ಹೆಚ್ಚು ಮಾಜಿ ಶಾಸಕರು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮನೆಯಲ್ಲಿ ಶುಕ್ರವಾರ ಸಭೆ ನಡೆಸಿದರು. ಸಭೆಯಲ್ಲಿ ಎಂ.ಪಿ.ರೇಣುಖಾಚಾರ್ಯ, ಹರತಾಳ್ ಹಾಲಪ್ಪ, ಪರಣ್ಣ ಮನವಳ್ಳಿ, ಬಸವರಾಜ್ ದಡೇಸೂರ್, ಗೋಪಾಲ್ ನಾಯಕ್, ಸುನೀಲ್ ಹೆಗಡೆ, ಸುನೀಲ್ ನಾಯಕ್, ಬಸವರಾಜ ನಾಯಕ್, ಪಿಳ್ಳೆ ಮುನಿಸ್ವಾಮಪ್ಪ, ಬೆಳ್ಳಿ ಪ್ರಕಾಶ್, ಮಸಾಲೆ ಜಯರಾಮ್, ಎಂ.ಡಿ.ಲಕ್ಷ್ಮಿನಾರಾಯಣ ಇದ್ದರು.
ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಎಂ.ಪಿ.ರೇಣುಖಾಚಾರ್ಯ ಮಾತನಾಡಿ, ‘ಕರ್ನಾಟಕದಲ್ಲಿ ಬಿಜೆಪಿಯನ್ನು ಮುಗಿಸಬೇಕೆಂದು ಕಾಂಗ್ರೆಸ್ ನಾಯಕರು ಸುಫಾರಿ ನೀಡಿದ್ದಾರೆ. ಆದ್ದರಿಂದಲೇ ಯತ್ನಾಳ್ ಎಲ್ಲರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬರುವ ದಿನಗಳಲ್ಲಿ ಅವರು ಬಾಯಿ ಮುಚ್ಚಿಕೊಂಡು ಸುಮ್ಮನಿರದಿದ್ದರೆ ನಾವು ಬೀದಿಗೆ ಬರಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.
ಹಿರಿಯ ನಾಯಕ ಸದಾನಂದಗೌಡರು ಮಾತನಾಡಿ, ಯತ್ನಾಳ್ ಮಹಾನಾಯಕರಾಗಿದ್ದಾರೆ. ಸದಾನಂದಗೌಡರದ್ದು ಬಿಚ್ಚಿಡುತ್ತೇನೆ ಎಂದಿದ್ದಾರೆ. ಏನು ಬಿಚ್ಚಿಡುತ್ತೀಯೋ ನೋಡೋಣ. ನೀನೊಬ್ಬ ನಾಗರಹಾವು, ಬ್ಲ್ಯಾಕ್ಮೇಲರ್ ಎಂದು ಏಕವಚನದಲ್ಲಿ ಕಿಡಿಕಾರಿದರು. ಪಕ್ಷಕ್ಕೆ ಯತ್ನಾಳ ಕೊಡುಗೆ ಏನು? ವಿಜಯಪುರದಲ್ಲಿ ತಾವೊಬ್ಬ ಗೆದ್ದು, ಉಳಿದೆಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲಲು ಮತ್ತು ಶಿಗ್ಗಾವಿ ಉಪಚುನಾವಣೆಯಲ್ಲಿ ಭರತ್ ಬೊಮ್ಮಾಯಿ ಸೋಲಲೂ ಯತ್ನಾಳ್ ಕಾರಣ ಎಂದು ಆರೋಪಿಸಿದರು.
ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾತನಾಡಿ, ನಮ್ಮಲ್ಲಿ ಯಾವುದೇ ರೀತಿಯ ಒಡಕುಗಳಿಲ್ಲ. ಕೆಲವು ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನ ಈಡೇರುವುದಿಲ್ಲ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 