ವಿದ್ಯಾರ್ಥಿಗಳಿಗೆ ಕಪ್ಯೂಟರ್ ಜ್ಞಾನ ಅಗತ್ಯ: ನಿರಂಜನಂದಪುರಿ ಶ್ರೀ
'Computer knowledge is essential for students'
ಹೂವಿನಹಡಗಲಿ 30: ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣದ ಜ್ಞಾನ ಅಗತ್ಯ ಇದೆ ಎಂದು ಕಾಗಿನಲೆ ಗುರುಪೀಠದ ಜಗದ್ಗುರು ನಿರಂಜನಂದಪುರಿ ಸ್ವಾಮೀಜಿಗಳು ಹೇಳಿದರು.
ಅವರು ತಾಲೂಕಿನ ಮೈಲಾರ ಗ್ರಾಮದ ಏಳು ಕೋಟಿ ವಸತಿ ಶಾಲೆಯಲ್ಲಿ ಕಂಪ್ಯೂಟರ್ ವಿಭಾಗದ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕತೆಯಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವುದರಿಂದ ಕಂಪ್ಯೂಟರ್ ಜ್ಞಾನವು ಉದ್ಯೋಗ ಪಡೆಯಲು ಸಹಾಯವಾಗುತ್ತದೆ. ಎಂದರು.
ಮುಖಂಡರಾದ ಬಿ.ಹನುಮಂತಪ್ಪ ಮಾತನಾಡಿ ಗ್ರಾಮೀಣ ಭಾಗದಲ್ಲಿ ಏಳುಕೋಟಿ ವಸತಿ ಶಾಲೆಯುಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯ, ಸಂಸ್ಕಾರ ವನ್ನು ಕಲಿಸುತ್ತಿದೆ ಎಂದರು.
ಶಿವಕುಮಾರ್, ಡಾ: ರಾಜು ಪ್ರವೀಣ ಕುರುವತ್ತಿ, ಈಟಿ ಲಿಂಗರಾಜು, ಬೀರ್ಪ ಹೊಸಕೇರಿ, ಎಂ.ಪರಮೇಶ್ವರ್ಪ, ಮರಿರಾಮಪ್ಪ, ಸೇರಿದಂತೆ ಶಾಲೆಯ ಪ್ರಾಂಶುಪಾಲರು ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 