‘ಪ್ರತಿಯೊಬ್ಬರೂ ಸ್ವಯಂ ಜನಗಣತಿಯಲ್ಲಿ ಭಾಗವಹಿಸಬೇಕು’
'Everyone should participate in the census themselves'
ಲೋಕದರ್ಶನ ವರದಿ
ಜಮಖಂಡಿ 02: ಪ್ರತಿಯೊಬ್ಬರೂ ಸ್ವಯಂ ಜನಗಣತಿಯಲ್ಲಿ ಭಾಗವಹಿಸಬೇಕು. ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಜನಗಣತಿ 2027ರ ಅಂಗವಾಗಿ ಸ್ವಯಂ ಗಣನೆ ಪ್ರಕ್ರಿಯೆಯನ್ನು 2026ರ ಏಪ್ರಿಲ್ 1ರಿಂದ ಏಪ್ರಿಲ್ 15 ರವರೆಗೆ ನಡೆಸಲಾಗುತ್ತದೆ. ಈ ಸಮಯದಲ್ಲಿ ಸರ್ಕಾರದ ಅಂತರ್ಜಾಲದಲ್ಲಿ ಸ್ವಯಂ ಆಗಿ ಜನರು ತಮ್ಮ ವಿವರವನ್ನು ನೀಡಬಹುದು ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಹೇಳಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಕುಟುಂಬವು ತಮ್ಮ ಮನೆಯ ಮಾಹಿತಿಯನ್ನು ನಿಖರವಾಗಿ ಮತ್ತು ಸಂಪೂರ್ಣವಾಗಿ ಸ್ವಯಂ ಗಣನ ವ್ಯವಸ್ಥೆಯ ಮೂಲಕ ಸಲ್ಲಿಸಬೇಕು. ಈ ಪ್ರಕ್ರಿಯೆ ಸರಿಯಾದ, ಪಾರದರ್ಶಕ ಹಾಗೂ ಸಮಯೋಚಿತ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿಯಾಗುತ್ತದೆ, ಇದು ಭವಿಷ್ಯದ ಯೋಜನೆ ಮತ್ತು ಅಭಿವೃದ್ಧಿಗೆ ಬಹಳ ಮುಖ್ಯವಾಗಿದೆ. ಮಹತ್ವದ ರಾಷ್ಟ್ರೀಯ ಕಾರ್ಯದಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ. ಆದ್ದರಿಂದ ಎಲ್ಲಾ ಕುಟುಂಬಗಳು ಸರ್ಕಾರದಿಂದ ನಿಗದಿ ಮಾಡಿದ ಅವಧಿಯೊಳಗೆ ಅಂತರಜಾಲವನ್ನು ಬಳಸಿ ಸ್ವಯಂ ಗಣನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ವಿನಂತಿಸಲಾಗಿದೆ. ಗಣತಿದಾರರು ಮನೆಗಳಿಗೆ ಬಂದಾಗ ನೀಡುವ ಗಣತಿ ಐಡಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು ಎಂದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 