'ಮದ್ಯದಂಗಡಿ ಹರಾಜು' ರಾಜ್ಯದ ಹೊಸ ವರ್ಷದ ಕೊಡುಗೆ
'Liquor store auction' is the state's New Year gift
ದಾವಣಗೆರೆ: ಮದ್ಯದಂಗಡಿ ಪರವಾನಗಿಗೆ 1. 95 ಕೋಟಿ ರೂ. ನಿಗದಿಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಬೃಹತ್ ಉದ್ದಿಮೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮದ್ಯದಂಗಡಿ ಹರಾಜು ರಾಜ್ಯ ಸರ್ಕಾರದ ಹೊಸ ವರ್ಷದ ಕೊಡುಗೆ ಎಂದು ಗುರುವಾರ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಇಲಾಖೆಯನ್ನೂ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್ ಪಿ) ಸೇರಿದಂತೆ ಎಲ್ಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಖಜಾನೆಯನ್ನು ಬರಿದು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ರಾಜ್ಯ ಸರ್ಕಾರದ ಖಜಾನೆಯಿಂದ ಸಾವಿರಾರು ಕೋಟಿ ಹಣ ಬಿಡುಗಡೆಯಾಗಿರುವುದು ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ, ಹಲವು ಬಾರಿ ಬಜೆಟ್ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇಂತಹ ಆರ್ಥಿಕ ತಜ್ಞರನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 