‘ನಿಯಮಿತ ವ್ಯಾಯಾಮ, ಧ್ಯಾನದಿಂದ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ’
'Regular exercise and meditation can maintain mental health'
ಲೋಕದರ್ಶನ ವರದಿ
ನಗರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಮತ್ತು ಉದ್ಯೋಗಿಗಳಿಗೆ ಒತ್ತಡರಹಿತ ಜೀವನ ನಿರ್ವಹಣೆ ಕುರಿತು ಮಾಹಿತಿ ನೀಡಿದ ಡಾ. ಚಂದ್ರಶೇಖರ ಹಳಿಂಗಳೆ
ಕಾಗವಾಡ 31: ನಿಯಮಿತ ವ್ಯಾಯಾಮ, ಧ್ಯಾನ, ಸಕಾರಾತ್ಮಕ ಚಿಂತನೆ ಮತ್ತು ಸರಿಯಾದ ಸಮಯ ನಿರ್ವಹಣೆಯೊಂದಿಗೆ ಆಧುನಿಕ ಜೀವನ ಶೈಲಿಯಲ್ಲಿ ಹೆಚ್ಚುತ್ತಿರುವ ಒತ್ತಡವನ್ನು ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಮಿರಜ್ ಪಟ್ಟಣದ ನಿರ್ಮಲ ಆಸ್ಪತ್ರೆ, ವ್ಯಸಮುಕ್ತಿ ಮತ್ತು ಪುನರ್ವಸತಿ ಕೇಂದ್ರದ ಸಂಸ್ಥಾಪಕ ಡಾ. ಚಂದ್ರಶೇಖರ ಹಳಿಂಗಳಿ ತಿಳಿಸಿದ್ದಾರೆ.
ಅವರು ಇತ್ತಿಚಿಗೆ ಮಹಾರಾಷ್ಟ್ರದ ಮಿರಜ್ ಪಟ್ಟಣದ ನಿರ್ಮಲ್ ಆಸ್ಪತ್ರೆ, ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರ ಮತ್ತು ಸಾಂಗಲಿ ಜಿಲ್ಲೆಯ ನಗರ ಯೋಜನಾ ಸಹಾಯಕ ನಿರ್ದೇಶಕರ ಕಚೇರಿ ಜಂಟಿಯಾಗಿ ಆಯೋಜಿಸಿದ್ದ ಒತ್ತಡ ನಿರ್ವಹಣೆ ಜೀವನದ ಕುರಿತು ವಿಶೇಷ ಶಿಬಿರದಲ್ಲಿ ಮಾತನಾಡುತ್ತಿದ್ದರು. ಒತ್ತಡದ ಕಾರಣಗಳು, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದರ ಪರಿಣಾಮಗಳು ಹಾಗೂ ಒತ್ತಡವನ್ನು ಕಡಿಮೆ ಮಾಡಲು ತೆಗೆದುಕೊಳ್ಳಬಹುದಾದ ವಿವಿಧ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಶಿಬಿರದಲ್ಲಿ ಹಾಜರಿದ್ದ ಅಧಿಕಾರಿಗಳು ಮತ್ತು ಉದ್ಯೋಗಿಗಳು ಡಾ. ಹಳಿಂಗಳೆ ಅವರಿಗೆ ವಿವಿಧ ಪ್ರಶ್ನೆಗಳನ್ನು ಕೇಳಿದರು. ಮತ್ತು ಒತ್ತಡ ನಿರ್ವಹಣೆಯ ಕುರಿತು ಮಾರ್ಗದರ್ಶನ ಪಡೆದರು.
ಈ ಸಂದರ್ಭದಲ್ಲಿ ನಗರ ಯೋಜನಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ನಿರ್ಮಲ್ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 