ಜ್ಞಾನ ಶಕ್ತಿ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ
'World No Tobacco Day' celebrated at Gyan Shakti Campus
ವಿಜಯಪುರ, 02 : ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನ ಶಕ್ತಿ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ದ ಅಂಗವಾಗಿ ಶಿಕ್ಷಣ ಅಧ್ಯಯನ ವಿಭಾಗ, ಎನ್.ಎಸ್.ಎಸ್. ಸ್ವಯಂ ಸೇವಕಿಯರು ಮಾನವ ಸರಪಳಿ ನಿರ್ಮಿಸುವ ಮೂಲಕ ವಿವಿಯ ಆವರಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಚಾಲನೆ ನೀಡಿದರು.
ತಂಬಾಕನಿಂದ ಆಗುವ ವಿವಿಧ ಅನಾಹುತಗಳ ಬಗ್ಗೆ ಅರಿವು ಮೂಡಿಸಲು ಕರಪತ್ರಗಳನ್ನು ಹಂಚಿದರು. ವಿಶ್ವವಿದ್ಯಾನಿಲಯದ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿ ತಂಬಾಕು ಮುಕ್ತ ದೇಶವಾಗಿಸಲು ಎಲ್ಲರೂ ಶ್ರಮ ಪಡಬೇಕು ಎಂದು ಪ್ರಚಾರ ನಡೆಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್.ಚಂದ್ರಶೇಖರ, ಎನ್.ಎಸ್.ಎಸ್ ಸಂಯೋಜಕ ಪ್ರೊ.ಅಶೋಕ ಸುರಪುರ, ಶಿಕ್ಷಣ ಅಧ್ಯಯನ ವಿಭಾಗದ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ವಿಷ್ಣು ಶಿಂಧೆ, ಡಾ.ಗುಲಾಬ್ ರಾಠೋಡ್, ಡಾ.ಪ್ರಜಾಪತಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 