ಶಾಸಕರ ನೇತೃತ್ವದಲ್ಲಿ ಗೂಂಡಾಗಿರಿ’
'Goons led by MLAs'
ಬಳ್ಳಾರಿ: ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ವಿಚಾರದಲ್ಲಿ ನಡೆದ ಗಲಾಟೆ, ಗುಂಡೇಟು ಪ್ರಕರಣ ಇದೀಗ ರಾಜಕೀಯವಾಗಿ ಮಹತ್ವ ಪಡೆದಿದ್ದು, ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ (ಜ.02) ಬಳ್ಳಾರಿಗೆ ಭೇಟಿ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಭರತ್ ರೆಡ್ಡಿ ನೇತೃತ್ವದಲ್ಲಿ ಗೂಂಡಾಗಿರಿ ನಡೆದಿದೆ. ಬ್ಯಾನರ್ ವಿಚಾರದಲ್ಲಿ ದೊಂಬಿ ಎಬ್ಬಿಸಿದ್ದಾರೆ. ಗೂಂಡಾಗಳು, ಕಾರ್ಯಕರ್ತರನ್ನು ಕರೆದುಕೊಂಡು ಬಂದು ಕಲ್ಲು ಎಸೆದಿದ್ದಾರೆ. ಸತೀಶ್ ರೆಡ್ಡಿ ಎನ್ನುವ ವ್ಯಕ್ತಿಯ ಖಾಸಗಿ ಗನ್ ಮ್ಯಾನ್ ಫೈಯರ್ ಮಾಡಿಸಿದ್ದಾನೆ. ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕು ಎಂದು ಹೇಳಿದರು.
ವಾಲ್ಮೀಕಿಗೆ ಮಹತ್ವ ಕೊಡಲು ನಮ್ಮ ಹಿಂದಿನ ಸಿಎಂ ಯಡಿಯೂರಪ್ಪರನ್ನು ಮನವೊಲಿಸಿದ್ದ ಶ್ರೀರಾಮುಲು ವಾಲ್ಮೀಕಿ ಜಯಂತಿ ಮಾಡಿಸಿದ್ದರು. ಬಳ್ಳಾರಿಯಲ್ಲೂ ಜನಾರ್ದನ ರೆಡ್ಡಿ, ರಾಮುಲು ಅವರು ಈಗಾಗಲೇ ವಾಲ್ಮೀಕಿ ಪುತ್ಥಳಿ ಇಟ್ಟಿಸಿದ್ದಾರೆ. ಆದರೂ ಈಗ ರಾಜಕೀಯ ತೆವಲಿಗೆ ಬ್ಯಾನರ್ ಪೋಸ್ಟ್ ಹಾಕಿಸಿ ಗಲಾಟೆ ಮಾಡಿದ್ದಾರೆ ಎಂದರು.
ಸಿಎಂ ಹಾಗೂ ಗೃಹ ಸಚಿವರು ದ್ವೇಷ ಭಾಷಣ ಕಾಯ್ದೆ ತರಲು ಯೋಚನೆ ಮಾಡುತ್ತಾರೆ. ಮೊದಲು ನಿಮ್ಮ ಶಾಸಕ ನಾರಾ ಭರತ್ ರೆಡ್ಡಿಯನ್ನು ಮೊದಲು ಒದ್ದು ಒಳಗೆ ಹಾಕಿ. ನಿಮಗೆ ತಾಕತ್ತಿದ್ದರೆ ಮೊದಲು ಒದ್ದು ಒಳಗೆ ಹಾಕಿ, ಹೈಕೋರ್ಟ್ ಜಡ್ಜ್ ಮೂಲಕ ಸರಿಯಾದ ತನಿಖೆ ಮಾಡಿಸಿ. ಮುಂದೆ ಮತ್ತೆ ಈ ರೀತಿ ಆಗಬಾರದು ಎನ್ನುದಾದರೆ ಮೊದಲು ಸರಿಯಾಗಿ ತನಿಖೆ ಮಾಡಿಸಿ ಎಂದು ವಿಜಯೇಂದ್ರ ಹೇಳಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 