‘ನಾಯಕರನ್ನು ಭೇಟಿ ಮಾಡಲೆಂದೇ ದೆಹಲಿಗೆ ಬಂದಿದ್ದೇನೆ’
'I came to Delhi to meet the leaders'
ನವದೆಹಲಿ: ಮುಖ್ಯಮಂತ್ರಿ ಸ್ಥಾನದ ವಿಷಯ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವಂತಹದ್ದಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ಈ ಸಭೆಯ ಯೋಜನೆಗಳೇನು ಎಂದು ಕೇಳಿದಾಗ, 'ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ. ಅವರು ನೀಡುತ್ತಾರೆ' ಎಂದರು.
ಈ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, 'ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ' ಎಂದರು.
ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, 'ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ' ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 