‘ಹೊಸ ತಂತ್ರಜ್ಞಾನದ ಸದುಪಯೋಗ ಮಾಡಿಕೊಳ್ಳಿ’
'Take advantage of new technology'
‘ಹೊಸ ತಂತ್ರಜ್ಞಾನದ ಸದುಪಯೋಗ ಮಾಡಿಕೊಳ್ಳಿ’
ಬೆಳಗಾವಿ 06: ವಿದ್ಯಾರ್ಥಿಗಳು ಕರ್ತವ್ಯ ಪ್ರಜ್ಞೆ, ಶ್ರದ್ಧೆ, ನಿಷ್ಠೆ ಬೆಳೆಸಿಕೊಳ್ಳಬೇಕು. ಉತ್ತಮ ಸಂಸ್ಕಾರ ರೂಢಿಸಿಕೊಳ್ಳಬೇಕು. ಸಕಾರಾತ್ಮಕ ಭಾವನೆಯಿಂದ ಪ್ರಯತ್ನಿಸಬೇಕು. ಹೊಸ ತಂತ್ರಜ್ಞಾನ ಸದುಪಯೋಗದಿಂದ ಜ್ಞಾನವರ್ಧನೆ ಮಾಡಿಕೊಂಡು ಬೆಳೆಯಬೇಕು” ಎಂದು ಡೆಕ್ಕನ್ ಮೆಡಿಕಲ್ ಸೆಂಟರಿನ ನಿರ್ದೇಶಕಿ ಡಾ.ಸಾವಿತ್ರಿ ದೊಡ್ಡಣ್ಣವರ ನುಡಿದರು. ಅವರು ಇಲ್ಲಿ ನಿನ್ನೆ ನಡೆದ ಎಸ್.ಪಿ.ಎಚ್. ಭರತೇಶ ಕನ್ನಡ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡುತ್ತ ವಿದ್ಯಾರ್ಥಿಗಳಿಗೆ ಹಿತೋಪದೇಶ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಭರತೇಶ ಶಿಕ್ಷಣ ಸಂಸ್ಥೆಯ ನಿರ್ದೇಶಕ ರಾಜೇಂದ್ರ ರಾಮಗೌಂಡಾ ಅವರು ಸತತ ಪರಿಶ್ರಮ, ಸಮಯಪ್ರಜ್ಞೆ, ಕ್ರಿಯಾಶೀಲತೆ ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಕರೆ ಕೊಟ್ಟರು. ಎ.ಎ.ಸನದಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಕಿಶನ ಮೂಲ್ಯ, ಬಸವರಾಜ ಹಿರೇಹೊಳಿ, ಶ್ರೀ ಕರೆಗಾರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕರಾದ ಅಶ್ವಿನಿ, ಸವಿತಾ ಹಾಗೂ ಮುಖ್ಯಾಧ್ಯಾಪಕ ಭರತೇಶ ಮಾರಣಬಸರಿ ಮಾತನಾಡಿದರು. ತರುಣ ಕುಂಬಾರ ವಂದಿಸಿದರು. ಅದಿತಿ ಹಾಗೂ ಶ್ರೇಯಾ ನಿರೂಪಿಸಿದರು.
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 