ರಥಸಪ್ತಮಿಯ ನಿಮಿತ್ಯ 108 ಸೂರ್ಯ ನಮಸ್ಕಾರ
108 Surya Namaskara on the occasion of Rathasaptami
ರಥಸಪ್ತಮಿಯ ನಿಮಿತ್ಯ 108 ಸೂರ್ಯ ನಮಸ್ಕಾರ
ಚಿಕ್ಕೋಡಿ 04: ಪ್ರತಿದಿನ ಸೂರ್ಯ ನಮಸ್ಕಾರದ ಅಭ್ಯಾಸ ನಮ್ಮ ಅನೇಕ ಮನೋದೈಹಿಕ ಕಾಯಿಲೆಗಳನ್ನು ದೂರಗೊಳಿಸಿ ಶರೀರವನ್ನು ಸದೃಢ ಮಾಡುತ್ತದೆ ಕಾರಣ ಇಂದಿನ ಯುವಕರು ಕಡ್ಡಾಯವಾಗಿ ಸೂರ್ಯ ನಮಸ್ಕಾರವನ್ನು ತಮ್ಮ ದೈನಂದಿನ ಜೀವನ ಶೈಲಿಯ ಕ್ರಮವಾಗಿ ರೂಢಿಸಿಕೊಳ್ಳಬೇಕೆಂದು ಚಿಕ್ಕೋಡಿಯ ಕೆ ಎಲ್ ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಕಿರಣಕುಮಾರ ಮುತ್ನಾಳಿ ಹೇಳಿದರು ಅವರು ಸ್ಥಳೀಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸ್ವಸ್ಥವೃತ್ತ ಹಾಗೂ ಯೋಗ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ರಥಸಪ್ತಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು 108 ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ಮಾಡಿದರು ಸಂಸ್ಕೃತ ಪ್ರಾಧ್ಯಾಪಕರಾದ ಸುದರ್ಶನ ಭಟ್ ಸೂರ್ಯ ದೇವರಿಗೆ ಅರ್ಘ್ಯ ಪ್ರದಾನ ಮಾಡಿದರು. ಯೋಗ ಶಿಕ್ಷಕರಾದ ಮಲ್ಲಿಕಾರ್ಜುನ ಬಚಡಿ ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ನೀಡಿದರು ಡಾ. ಜೀವನ ಕುಮಾರ್ ಗಡಗೆ ಸ್ವಾಗತ ಕೋರಿದರು, ಡಾ. ಸಂತೋಷ ಶಿವಣ್ಣವರ ವಂದಿಸಿದರು. ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಿಬ್ಬಂದಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 