ರಥಸಪ್ತಮಿಯ ನಿಮಿತ್ಯ 108 ಸೂರ್ಯ ನಮಸ್ಕಾರ
108 Surya Namaskara on the occasion of Rathasaptami
ರಥಸಪ್ತಮಿಯ ನಿಮಿತ್ಯ 108 ಸೂರ್ಯ ನಮಸ್ಕಾರ
ಚಿಕ್ಕೋಡಿ 04: ಪ್ರತಿದಿನ ಸೂರ್ಯ ನಮಸ್ಕಾರದ ಅಭ್ಯಾಸ ನಮ್ಮ ಅನೇಕ ಮನೋದೈಹಿಕ ಕಾಯಿಲೆಗಳನ್ನು ದೂರಗೊಳಿಸಿ ಶರೀರವನ್ನು ಸದೃಢ ಮಾಡುತ್ತದೆ ಕಾರಣ ಇಂದಿನ ಯುವಕರು ಕಡ್ಡಾಯವಾಗಿ ಸೂರ್ಯ ನಮಸ್ಕಾರವನ್ನು ತಮ್ಮ ದೈನಂದಿನ ಜೀವನ ಶೈಲಿಯ ಕ್ರಮವಾಗಿ ರೂಢಿಸಿಕೊಳ್ಳಬೇಕೆಂದು ಚಿಕ್ಕೋಡಿಯ ಕೆ ಎಲ್ ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಕಿರಣಕುಮಾರ ಮುತ್ನಾಳಿ ಹೇಳಿದರು ಅವರು ಸ್ಥಳೀಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸ್ವಸ್ಥವೃತ್ತ ಹಾಗೂ ಯೋಗ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ರಥಸಪ್ತಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು 108 ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ಮಾಡಿದರು ಸಂಸ್ಕೃತ ಪ್ರಾಧ್ಯಾಪಕರಾದ ಸುದರ್ಶನ ಭಟ್ ಸೂರ್ಯ ದೇವರಿಗೆ ಅರ್ಘ್ಯ ಪ್ರದಾನ ಮಾಡಿದರು. ಯೋಗ ಶಿಕ್ಷಕರಾದ ಮಲ್ಲಿಕಾರ್ಜುನ ಬಚಡಿ ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ ನೀಡಿದರು ಡಾ. ಜೀವನ ಕುಮಾರ್ ಗಡಗೆ ಸ್ವಾಗತ ಕೋರಿದರು, ಡಾ. ಸಂತೋಷ ಶಿವಣ್ಣವರ ವಂದಿಸಿದರು. ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಿಬ್ಬಂದಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 