6 ದಿನಗಳ ಕಾಲ ನಡೆದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನಕ್ಕೆ ತೆರೆ
6-day Plantation and Horticulture Campaign kicks off
6 ದಿನಗಳ ಕಾಲ ನಡೆದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನಕ್ಕೆ ತೆರೆ
ಕೊಪ್ಪಳ 21: ತೋಟಗಾರಿಕೆ ಇಲಾಖೆಯಿಂದ ಆ.15 ರಿಂದ 20ರ ವರೆಗೆ ಹಮ್ಮಿಕೊಂಡಿದ್ದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ-2025 ಕ್ಕೆ ಬುಧವಾರದಂದು ತೆರೆ ದೊರೆತಿದ್ದು, 45 ಲಕ್ಷಕ್ಕೂ ಹೆಚ್ಚಿನ ಸಸಿಗಳ ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ಆಗಿದೆ.
ಕೊಪ್ಪಳ ನಗರದ ಕೊಪ್ಪಳ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿ ಆವರಣದಲ್ಲಿ 6 ದಿನಗಳ ಕಾಲ ನಡೆದ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನದಲ್ಲಿ 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶ ಸಸಿಗಳ ಖರೀದಿಗೆ ರೈತರು ಮುಂಗಡವಾಗಿ ನೊಂದಾಯಿಸಿರುತ್ತಾರೆ ಹಾಗೂ 2000 ಎಕರೆಗೂ ಹೆಚ್ಚಿನ ತೋಟಗಾರಿಕೆ ಪ್ರದೇಶ ವಿಸ್ತರಣೆಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರು ಮಾವು, ಮೋಸಂಬಿ, ನೇರಳೆ, ಸೇಬು, ನಿಂಬೆ, ಹಲಸು ಹಾಗೂ ವಿದೇಶಿ ಸಸಿಗಳ ಹಾಗೂ ಸಾಂಬಾರ ಪದಾರ್ಥ ಬೆಳೆಯಲು ಮುಂಗಡವಾಗಿ ಸಸಿಗಳನ್ನು ಖರೀದಿಸಲು ನೊಂದಾಯಿಸಿರುತ್ತಾರೆ. ಇದರಿಂದ ತೋಟಗಾರಿಕೆ ಪ್ರದೇಶ ವಿಸ್ತರಣೆಗೆ ಅನುಕೂಲವಾಗಲಿದೆ. ಮಾವು, ಪೇರಲ, ತೆಂಗು, ನುಗ್ಗೆ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಉತ್ಪಾದಿಸಿದ ತರಕಾರಿ ಸಸಿಗಳು, ಹೂವಿನ ಅಲಂಕಾರಿಕ ಸಸಿಗಳು, ಎರೆಹುಳು ಗೊಬ್ಬರ, ಬೇವಿನ ಹಿಂಡಿ, ಎರೆಜಲ ಹಾಗೂ ವಿವಿಧ ಪರಿಕರಗಳನ್ನು ಖರೀದಿಸಲು ರೈತರು ಹಾಗೂ ಸಾರ್ವಜನಿಕರು ಬೇಡಿಕೆಯನ್ನು ಸಲ್ಲಿಸಿದಗದು, 45 ಲಕ್ಷಕ್ಕೂ ಹೆಚ್ಚಿನ ಸಸಿಗಳ ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ಮಾಡುವ ಮೂಲಕ ಸಸ್ಯಸಂತೆಯು ಯಶಸ್ವಿಯಾಗಿ ತೆರೆಕಂಡಿತು.
ಈ ಸಸ್ಯ ಸಂತೆಯಲ್ಲಿ ವಿದೇಶಿ ಸಸಿಗಳಲ್ಲಿ ಮುಖ್ಯವಾಗಿ ಮಿಯಾಜಾಕಿ ಮಾವಿನ ಸಸಿಗೆ ಸಾಕಷ್ಟು ಬೇಡಿಕೆ ಬಂದು ಜನರು ತಮ್ಮ ತೋಟದಲ್ಲಿ ಹಾಗೂ ಮನೆಯ ಹತ್ತಿರ ಬೆಳೆಯಲು 4 ಸಾವಿರಕ್ಕೂ ಹೆಚ್ಚಿನ ಗಿಡಗಳನ್ನು ಖರೀದಿಸಲು ತಮ್ಮ ಹೆಸರು ನೊಂದಾಯಿಸಿದರು ಹಾಗೂ 2 ಸಾವಿರಕ್ಕೂ ಹೆಚ್ಚಿನ ಅವಕಾಡೋ ಹಣ್ಣಿನ ಗಿಡಗಳನ್ನು ಖರೀದಿಸಲು ಸಹ ಹೆಸರು ನೊಂದಾಯಿಸಿದರು. ಮೆಕಡೋಮಿಯಾ, ಮ್ಯಾಂಗೋಸ್ಟಿನ್, ಲಿಚ್ಚಿ, ವಿದೇಶಿ ಹಲಸು, ಚರ್ರಿ ಮುಂತಾದ ವಿದೇಶಿ ಹಣ್ಣಿನ ತಳಿಗಳ ಸಸಿಗಳು ಸೇರಿ 5 ಸಾವಿರಕ್ಕೂ ಹೆಚ್ಚಿನ ವಿದೇಶಿ ಹಣ್ಣಿನ ಸಸಿಗಳನ್ನು ತಮ್ಮತೋಟ ಮನೆಯ ಮುಂದೆ ನಾಟಿ ಮಾಡಲುರೈತರು ಹಾಗೂ ಸಾರ್ವಜನಿಕರು ಸಸಿಗಳನ್ನು ಖರೀದಿಸಲು ನೊಂದಾಯಿಸಿರುತ್ತಾರೆ.
ರೈತರಿಗಾಗಿಗಿಣಗೇರಾ ಮಣ್ಣು, ನೀರು ಮತ್ತು ಎಲೆ ವಿಶ್ಲೇಷಣಾ ಪ್ರಯೋಗಾಲಯದ ವತಿಯಿಂದರೈತರಿಗೆ ಮಣ್ಣು ಮತ್ತು ನೀರು ಪರೀಕ್ಷೆ ಕುರಿತು ಮಾಹಿತಿ ನೀಡಲಾಯಿತು. ಫ್ಲೋರೆಜನ್ ಆರ್ಗ್ಯಾನಿಕ್ಸ್ರವರಿಂದ ಹಲಸು ಬೆಳೆಯ ಬಗ್ಗೆ 2500 ರೈತರಿಗೆ ಸಾವಯವ ಕೃಷಿಯಲ್ಲಿ ಪದ್ಧತಿ ಮತ್ತು ದೃಢೀಕರಣ ಪಡೆಯುವ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಬನ್ ಕ್ರೆಡಿಟ್ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು. ಹನಿ ನೀರಾವರಿ ಕಂಪನಿಗಳಾದ ಬಿ.ಎನ್.ಎಸ್. ಇರಿಗೇಷನ್, ಬಿ.ಕೆ. ಇರಿಗೇಷನ್ ರವರು ಹನಿ ನೀರಾವರಿ ಅಳವಡಿಸಲು ಒಟ್ಟು ಒಂದು ಸಾವಿರ ರೈತರಿಗೆ ಮನವರಿಕೆ ಮಾಡಿ ರೈತರಿಂದ ಅರ್ಜಿಗಳನ್ನು ಪಡೆದರು. ಹೊಸದಾಗಿ ತೋಟಗಾರಿಕೆ ಮಾಡುವ 5 ಸಾವಿರಕ್ಕೂ ಹೆಚ್ಚಿನ ರೈತರಿಗೆ ಇಲಾಖೆಯ ಅಧಿಕಾರಿಗಳು ಯೋಜನೆಗಳ ಕುರಿತು ಹಾಗೂ ತಾಂತ್ರಿಕ ಮಾಹಿತಿಯನ್ನು ನೀಡಿದರು.
ಇಲಾಖೆಯ ಯೋಜನೆಗಳು ಹಾಗೂ ವಿವಿಧ ವಿದೇಶಿ ಹಣ್ಣಿನ ಬೆಳೆಗಳ ಬೇಸಾಯ ಕ್ರಮಗಳ ತಾಂತ್ರಿಕ ಮಾಹಿತಿ ಬಗ್ಗೆ ಅಲ್ಲದೇ ರೈತರು ನಿರಂತರವಾಗಿ ಕೃಷಿಯಲ್ಲಿ ಆದಾಯ ಪಡೆಯುವುದರ ಬಗ್ಗೆ ಮತ್ತು ಆದಾಯವನ್ನು ದ್ವಿಗುಣಗೊಳಿಸುವ ಬಗ್ಗೆ 100 ಕ್ಕೂ ಹೆಚ್ಚಿನ ಪ್ಲೇಕ್ಸ್ ಗಳನ್ನು ಅಳವಡಿಸಿ ರೈತರಿಗೆ ಮಾಹಿತಿ ನೀಡಲಾಯಿತು.
ಒಟ್ಟಾರೆ 6 ದಿನಗಳ ಕಾಲ ನಡೆದ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನದಲ್ಲಿ ಅಂದಾಜು 10,000ಕ್ಕೂ ಹೆಚ್ಚಿನ ಸ್ಥಳೀಯ ಹಾಗೂ ಹೊರ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 