ನಾದಮೃತ ಎಂಬ ವಿಶೇಷ ಕಾರ್ಯಕ್ರಮ
A special program called Naadamrutha
ಬಳ್ಳಾರಿ 18: ನಾದಯೋಗಿ ಗುರು ಪುಟ್ಟರಾಜ ಸಂಗೀತ ಮತ್ತು ಲಲಿತ ಕಲಾ ಸಂಸ್ಥೆಯವತಿಯಿಂದ ಚಳ್ಳಾರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾದಮೃತ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮುಖ್ಯ ಗುರುಗಳಾದ ಯೋಗನರಸಿಂಹರವರು ಸಂಗೀತಕ್ಕೆ ಭಾಷೆಯ ಗಡಿ ಇಲ್ಲ ಅದಕ್ಕೆ ಪ್ರಾಣಿ ಪಶು ಪಕ್ಷಿಗಳು ಕೂಡ ಹೊರತಾಗಿಲ್ಲ, ಸಂಗೀತ ಒಂದು ದೇವರ ಅತ್ಯದ್ಭುತ ಕೊಡುಗೆಯಾಗಿದೆ ಎಂದರು. ಅಧ್ಯಕ್ಷತೆಯನ್ನು ಎಸ್ ಡಿ ಎಂಸಿ ಅಧ್ಯಕ್ಷರಾದ ಯಮನೂರ್ಪ ಗದಗಿನ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಸುಜಾತ, ಗೀತಾ, ಗುನ್ನಪ್ಪ ಗುಮಗೇರಿ, ಶರಣಪ್ಪ ಗೆದಗೇರಿ, ಯಲ್ಲಪ್ಪ ದೊಡ್ಡಮನಿ, ಬಸಪ್ಪ ಹಳ್ಳಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಗೀತ ಶರಣಪ್ಪರಿಂದ ಸುಗಮ ಸಂಗೀತ, ಶ್ಯಾಮಲಾ ದೊಡ್ಡಮನಿಯವರಿಂದ ಜನಪದ ಸಂಗೀತ, ಸಂಜನ್ ಬೆಲ್ಲದರಿಂದ ವಚನ ಸಂಗೀತ, ಯೋಗನರಸಿಂಹರವರಿಂದ ಜನಪದ ಗೀತೆಗಳು, ರಂಜಿತಾ ನಂದ್ಯಾಲ ಭರತನಾಟ್ಯ ಕಾರ್ಯಕ್ರಮ ಸೊಗಸಾಗಿ ಮೂಡಿ ಬಂದವು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 