ನಾಳೆ ಅಭಯ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
Abhay Anjaneyaswamy idol installation tomorrow
ನಾಳೆ ಅಭಯ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
ಕಂಪ್ಲಿ 14: ತಾಲೂಕಿನ ಸಣಾಪುರ ಗ್ರಾಪಂಯ ಬಸವೇಶ್ವರ ಕ್ಯಾಂಪಿನಲ್ಲಿ ಆರಾಧ್ಯ ದೇವ ಅಭಯ ಆಂಜನೇಯ್ಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಶನಿವಾರ ಜರುಗಿದವು. ಇಲ್ಲಿನ ದೇವಸ್ಥಾನದಲ್ಲಿ ಡಿ.15ರಂದು ಆಂಜನೇಯ್ಯಸ್ವಾಮಿ ಶಿಲಾ ಮೂರ್ತಿ ಪ್ರತಿಷ್ಠಾಪನೆ ಅದ್ಧೂರಿಯಾಗಿ ಜರುಗಲಿದೆ. ಈ ಹಿನ್ನಲೆ ಶನಿವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಪುರೋಹಿತ ಪಿ.ಶಿವರಾಮ್ ಕೃಷ್ಣ ಅವರ ನೇತೃತ್ವದಲ್ಲಿ ಮಹಾಗಣಪ ಪೂಜೆ, ಮಹಾಭಿಷೇಕ, ನವಗ್ರಹ ಹೋಮ, ದೇವತೆ ಹೋಮ, ಧ್ಯಾನ ದಿವಸ, ಸಂಜೆ ಶಿಲಾ ಮೂರ್ತಿ ಮೆರವಣಿಗೆ ಹಾಗೂ ಮಹಾಮಂಗಳಾರತಿ ಭಕ್ತರ ಸಮ್ಮುಖದಲ್ಲಿ ನೆರವೇರಿದವು. ಮಹಿಳೆಯ ಕೋಲಾಟ ಜರುಗಿದವು. ಈ ಸಂದರ್ಭದಲ್ಲಿ ಬಸವೇಶ್ವರಕ್ಯಾಂಪಿನ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು. ಭಾನುವಾರ ಬೆಳಿಗ್ಗೆ ಆಂಜನೇಯಸ್ವಾಮಿ ಶಿಲಾ ಮೂರ್ತಿ ಲೋಕಾರೆ್ಣಗೊಳ್ಳಲಿದೆ. ಮಹಿಳೆಯರ ಕೋಲಾಟ ಜರುಗಿದವು.
ತಾಲೂಕಿನ ಸಣಾಪುರ ಗ್ರಾಪಂ ವ್ಯಾಪ್ತಿಯ ಬಸವೇಶ್ವರಕ್ಯಾಂಪಿನ ಆಂಜನೇಯ್ಯಸ್ವಾಮಿ ದೇವಸ್ಥಾನದಲ್ಲಿ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 