ಆಕಸ್ಮಿಕ ಬೆಂಕಿ: ಅಪಾರ ಹಾನಿ
ಮುಂಡಗೋಡ 02: ಪಟ್ಟಣದ ಆನಂದ ನಗರದಲ್ಲಿ ಬುಧವಾರ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ.
ಶೇಖಯ್ಯಾ ಹಿರೇಮಠ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯವರು ನೀರು ಕಾಯಿಸಲು ಬೆಂಕಿ ಹಚ್ಚಿ ಹೊರಗೆ ಹೋಗಿದ್ದಾರೆ. ಸ್ವಲ್ಪ ಸಮಯದ ನಂತರ ನೋಡ ನೋಡುತ್ತಲೆ ಬೆಂಕಿಯು ವ್ಯಾಪಿಸಿದೆ ಈ ಬೆಂಕಿ ಇತರ ಮನೆಗಳಿಗೂ ವ್ಯಾಪಿಸುವ ಸಾಧ್ಯತೆ ಕೂಡ ಇತ್ತು. ಆದರೆ ಅಗ್ನಿಶಾಮಕ ದಳದವರ ಕ್ಷಿಪ್ರ ಕಾಯರ್ಾಚರಣೆಯಿಂದಾಗಿ ಬೆಂಕಿ ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಗಿದೆ. ಈ ಅವಘಡದಿಂದ ಕಟ್ಟಿಗೆ, ಹಂಚು, ಪಾತ್ರೆಗಳು, ಟಿ.ವಿ. ಮುಂತಾದ ಗೃಹಬಳಕೆ ವಸ್ತುಗಳು, ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.ಈ ಅವಘಡದಿಂದ ಸುಮಾರ 15000ರೂ ಹಾನಿಯಾಗಿದೆ ಎನ್ನಲಾಗಿದೆ.
ಅಗ್ನಿ ಶಾಮಕದಳದ ಸಿಬ್ಬಂದಿಗಳಾದ ಯು.ಎಲ್.ಬಾಳೆಕಟ್ಟಿ, ಬಸವರಾಜ ಇಂಚಲ, ಗುರುಪ್ರಸಾದ ಕಮಲಾಕರ, ದುರ್ಗಪ್ಪ ಹರಿಜನ,ಶಿವಾಜಿ ರಾಣಿಗೇರ, ಲಕ್ಷ್ಮಣ ವರಕ ಬೆಂಕಿ ನಂದಿಸುವ ಕಾಯರ್ಾಚರಣೆಯಲ್ಲಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 