ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ
ರಾಯಬಾಗ: ತಾಲೂಕಿನ ಬಾವನಸೌಂದತ್ತಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ನಷ್ಟವಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ಸುರೇಶ ಖೆಮಲಾಪೂರೆ, ತಮ್ಮಾನಿ ಮಹಾಜನ, ಬಾಳು ಜಾಧವ, ಬಾಳು ಪವಾರ, ವಸಂತ ಬುವಾ, ನಂದು ಅರಗೆ ಇವರಿಗೆ ಸೇರಿದ್ದ ಸುಮಾರು 25 ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿ ಕಟಾವಿಗೆ ಬಂದ ಕಬ್ಬಿನ ಬೆಳೆ ಸುಟ್ಟು ಕರಕಲಾಗಿದೆ. ಬೆಂಕಿ ಅನಾಹುತದಿಂದ ಸುಮಾರು 50 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ವಿಷಯ ತಿಳದಿ ಸ್ಥಳೀಯ ಜನರು ಹಾಗೂ ಅಗ್ನಿ ಶಾಮಕದಳದವರು ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 