ಕಾಯ್ದೆಗಳ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಿ
Advancing the protection of children through laws
ಕಾಯ್ದೆಗಳ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಿ
ಹಿಡಕಲ್ ಡ್ಯಾಂ : ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಅನೇಕ ಕಾನೂನುಗಳಿದ್ದರೂ ಸಹ ಇನ್ನು ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲುತ್ತಿಲ್ಲ, ಕೌಟುಂಬಿಕ ಹಿಂಸೆ ಕಿಶೋರಿಯರ ತಾಯ್ತನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು, ಹೆಚ್ಚು ವರದಿಯಾಗುತ್ತಿವೆ. ಮಹಿಳೆಯರ ಸಾಮಾಜಿಕ, ಆರ್ಥಿಕ, ಮಾನಸಿಕ, ಯೋಚನೆಗಳಿಂದ ರಕ್ಷಿಸಲು ಕಾಯ್ದೆಗಳು ಸಮರ್ಕ ಬಳಕೆ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ನಲ್ಲಿ ಜಿಲ್ಲಾ ಪಂಚಾಯತ್ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನ ಯೋಜನೆಯ ಸಹಭಾಗಿತ್ವದಲ್ಲಿ ಹಿಡಕಲ್ ಡ್ಯಾಮ್ ಡಾ. ದುರ್ಗಾಬಾಯಿ ದೇಶಮುಖ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಕೇಂದ್ರೀಕೃತವಾದ ಕಾಯ್ದೆಗಳ ಕುರಿತು ಒಂದು ದಿನದ ಕಾರ್ಯಗಾರದಲ್ಲಿ ಮಾತನಾಡಿದರು ಮುಂದುವರೆದು ಕೌಟುಂಬಿಕ ದೌರ್ಜನ್ಯ ಕಾಯ್ದೆ ಬಗ್ಗೆ ವಿವರಿಸಿದ್ದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಲ್ಪಾ ದೇಸಾಯಿ ಮಾತನಾಡಿ ಶಕ್ತಿ ಸದನ ಸಾಂತ್ವನ ಮಹಿಳಾ ಸಹಾಯವಾಣಿ, ಒನ್ ಸ್ಟಾಪ್ ಸೆಂಟರ್ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ದ್ರಾಕ್ಷಾಯಣಿ ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಗಂಧ ಅಲ್ಲಟ್ಟಿ ಸ್ವಾಗತಿಸಿ ನಿರೂಪಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 