ಕಬ್ಬೂರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ಐಹೊಳೆ ಚಾಲನೆ
Aihole is running for drinking water supply project to Kabbur town
ಕಬ್ಬೂರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ಐಹೊಳೆ ಚಾಲನೆ
ಚಿಕ್ಕೋಡಿ 05: ತಾಲೂಕಿನ ಕಬ್ಬೂರ ಪಟ್ಟಣಕ್ಕೆ ಸಮರ್ಕ ಕುಡಿಯುವ ನೀರು ಸರಬರಾಜು ಒದಗಿಸುವ ಯೋಜನೆಗೆ ಸುಮಾರು 18 ಕೋಟಿ ರೂ ಅನುದಾನ ಮಂಜೂರಾಗಿದೆ. ಶೀಘ್ರದಲ್ಲಿ ಪಟ್ಟಣದ ಜನರಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಪುರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.
ತಾಲೂಕಿನ ಕಬ್ಬೂರ ಪಟ್ಟಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಅಮೃತ 2.0 ಯೋಜನೆಯಡಿ ಮಂಜೂರಾದ 18 ಕೋಟಿ ರೂ ವೆಚ್ಚದ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ನೇರವೇರಿಸಿ ಅವರು ಮಾತನಾಡಿದರು.
ದೇಶದ 1.0 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಮಧ್ಯಮ ಹಾಗೂ ಸಣ್ಣ ಪಟ್ಟಣಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಗೊಳಿಸಲು ಅಮೃತ ಯೋಜನೆಯಡಿ ಭಾರತ ಸಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ದೆಹಲಿ ಇವರು ಮಾರ್ಗಸೂಚಿ ಹೊರಡಿಸಿರುತ್ತಾರೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ 50 ರಷ್ಟು, ರಾಜ್ಯ ಸರ್ಕಾರದ ಶೇ 40 ರಷ್ಟ್ರು ಮತ್ತು ಸ್ಥಳೀಯ ಸಂಸ್ಥೆಗಳಿಂದ ಶೇ 10 ರಷ್ಟು ಅನುದಾನ ನಿಗದಿಯಾಗಿರುತ್ತದೆ ಎಂದರು.
ಈ ಯೋಜನೆಯಡಿ ಕಬ್ಬೂರ ಪಟ್ಟಣಕ್ಕೆ ಮಾತ್ರ ಸಮೀತವಾಗಿದೆ. ಮುಂಬರುವ ದಿನಗಳಲ್ಲಿ ಕೆಂಚನಟ್ಟಿ, ಮೀರಾಪೂರಹಟ್ಟಿ, ಜೋಡಟ್ಟಿ ಗ್ರಾಮಗಳಿಗೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆ ರೂಪಿಸಲಾಗುತ್ತದೆ ಎಂದರು.
ಸಚಿವ ಸತೀಶ ಜಾರಕಿಹೊಳಿ ಆಪ್ತ ಸಹಾಯಕ ಶಿವು ಪಾಟೀಲ ಮಾತನಾಡಿ ಶಾಸಕ ದುರ್ಯೋಧನ ಐಹೊಳೆ ಮತ್ತು ಸಂಸದೆ ಪ್ರಿಯಾಂಕ ಜಾರಕಿಹೊಳಿ ವಿಶೇಷ ಪ್ರಯತ್ನದಿಂದ ಈ ಯೋಜನೆ ಮಂಜೂರಾಗಿದೆ. ಪಟ್ಟಣದ ನಾಗರಿಕರು ಓಣಿಗಳಲ್ಲಿ ಪೈಪಲೈನ ಹಾಕುವಾಗ ಸಹಕರಿಸಬೇಕು. ಇದು ಪ್ರತಿಯೊಂದು ಮನೆಗಳಿಗೆ ನೀರು ಸರಬರಾಜು ಆಗುತ್ತದೆ ಎಂದರು.
ದುರೀಣ ಸುರೇಶ ಬೆಲ್ಲದ, ಬಾಳೇಶ ಕುಚನೂರ, ಮಹಾದೇವ ಜಿವಣಿ, ಮಡ್ಡೇಪ್ಪ ನಿರ್ವಾಣಿ, ರಾಘವೇಂದ್ರ ದೇಶಪಾಂಡೆ, ಅಬ್ಬಾಸ ನದಾಫ, ಮಹಾದೇವ ಪ್ರಧಾನಿ, ಶಂಕರ ಮಹಾದ್ವಾರ, ಶಿದ್ರಾಮ ಹಿರೇಕೊಡಿ, ಸದಾಶಿವ ಘೋರೆ್ಡ ಮುಂತಾದವರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 