ಉಪ ಮುಖ್ಯಮಂತ್ರಿಯಾದ ಬೆನ್ನಲ್ಲೇ ನೀರಾವರಿ ಹಗರಣದಿಂದ ಖುಲಾಸೆಗೊಂಡ ಅಜಿತ್ ಪವಾರ್
ajit pavar
ಮುಂಬೈ, ನ.25: 70,000 ಕೋಟಿ ರೂ.ಗಳ ನೀರಾವರಿ ಹಗರಣದಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳ ಸೋಮವಾರ ಕ್ಲೀನ್ ಚಿಟ್ ನೀಡಿದೆ.
ಅಜಿತ್ ಭಾಗಿಯಾಗಿದ್ದ ಕನಿಷ್ಠ ಒಂಬತ್ತು ಪ್ರಕರಣಗಳ ತನಿಖೆಯನ್ನು ಎಸಿಬಿ ಮುಕ್ತಾಯಗೊಳಿಸಿದೆ.
ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.
ಆದಾಗ್ಯೂ, ಈ ಯಾವುದೇ ಪ್ರಕರಣಗಳು ಅಜಿತ್ ಅವರಿಗೆ ಸಂಬಂಧಿಸಿಲ್ಲ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳದ ಮಹಾನಿರ್ದೇಶಕ ಪರಂಬೀರ್ ಸಿಂಗ್ ಹೇಳಿದ್ದಾರೆ.
ವಿದರ್ಭ ಪ್ರದೇಶದ ವಾಶಿಮ್, ಯವತ್ಮಾಲ್, ಅಮರಾವತಿ ಮತ್ತು ಬುಲ್ಧನಾದಲ್ಲಿನ ದೊಡ್ಡ ಮತ್ತು ಸಣ್ಣ ನೀರಾವರಿ ಯೋಜನೆಗಳಿಗೆ ಈ ಪ್ರಕರಣಗಳು ಸಂಬಂಧಿಸಿವೆ ಎನ್ನಲಾಗಿದೆ.
ಈ ಪ್ರಕರಣಗಳು 10 ವರ್ಷ ಹಿಂದಿನದ್ದಾಗಿದೆ. ಆಗ ಕಾಂಗ್ರೆಸ್-ಎನ್ಸಿಪಿ ಸರ್ಕಾರದಲ್ಲಿ ಅಜಿತ್ ಪವಾರ್ ನೀರಾವರಿ ಸಚಿವರಾಗಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 