ಉಪ ಮುಖ್ಯಮಂತ್ರಿಯಾದ ಬೆನ್ನಲ್ಲೇ ನೀರಾವರಿ ಹಗರಣದಿಂದ ಖುಲಾಸೆಗೊಂಡ ಅಜಿತ್ ಪವಾರ್
ajit pavar
ಮುಂಬೈ, ನ.25: 70,000 ಕೋಟಿ ರೂ.ಗಳ ನೀರಾವರಿ ಹಗರಣದಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳ ಸೋಮವಾರ ಕ್ಲೀನ್ ಚಿಟ್ ನೀಡಿದೆ.
ಅಜಿತ್ ಭಾಗಿಯಾಗಿದ್ದ ಕನಿಷ್ಠ ಒಂಬತ್ತು ಪ್ರಕರಣಗಳ ತನಿಖೆಯನ್ನು ಎಸಿಬಿ ಮುಕ್ತಾಯಗೊಳಿಸಿದೆ.
ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.
ಆದಾಗ್ಯೂ, ಈ ಯಾವುದೇ ಪ್ರಕರಣಗಳು ಅಜಿತ್ ಅವರಿಗೆ ಸಂಬಂಧಿಸಿಲ್ಲ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳದ ಮಹಾನಿರ್ದೇಶಕ ಪರಂಬೀರ್ ಸಿಂಗ್ ಹೇಳಿದ್ದಾರೆ.
ವಿದರ್ಭ ಪ್ರದೇಶದ ವಾಶಿಮ್, ಯವತ್ಮಾಲ್, ಅಮರಾವತಿ ಮತ್ತು ಬುಲ್ಧನಾದಲ್ಲಿನ ದೊಡ್ಡ ಮತ್ತು ಸಣ್ಣ ನೀರಾವರಿ ಯೋಜನೆಗಳಿಗೆ ಈ ಪ್ರಕರಣಗಳು ಸಂಬಂಧಿಸಿವೆ ಎನ್ನಲಾಗಿದೆ.
ಈ ಪ್ರಕರಣಗಳು 10 ವರ್ಷ ಹಿಂದಿನದ್ದಾಗಿದೆ. ಆಗ ಕಾಂಗ್ರೆಸ್-ಎನ್ಸಿಪಿ ಸರ್ಕಾರದಲ್ಲಿ ಅಜಿತ್ ಪವಾರ್ ನೀರಾವರಿ ಸಚಿವರಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 