ಅಂಬರೀಶ್ರನ್ನು ಕಳೆದುಕೊಂಡ ನಾವೆಲ್ಲರೂ ದುರಾದೃಷ್ಟವಂತರು: ಸುಧಾರಾಣಿ
ಲೋಕದರ್ಶನ ವರದಿ
ಕೊಪ್ಪಳ 05: ಹಿರಿಯ ನಟ ಅಂಬರೀಶ್ ನಿಧನದಿಂದ ನಮ್ಮ ಕನ್ನಡ ಚಿತ್ರರಂಗ ಕುಟುಂಬವು ಒಂದು ದೊಡ್ಡ ಪರ್ವತವನ್ನು ಕಳೆದುಕೊಂಡಿದೆ. ಅಂಬರೀಶ್ ಅವರನ್ನು ಕಳೆದುಕೊಂಡ ನಾವೆಲ್ಲರೂ ನಿಜಕ್ಕೂ ದುರಾದೃಷ್ಟವಂತರು ಎಂದು ನಟಿ ಸುಧಾರಾಣಿ ಹೇಳಿದರು.
ಕೊಪ್ಪಳ ತಾಲೂಕಿನ ಹನಕುಂಟಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರು ನಮ್ಮಂತ ಕಿರಿಯ ನಟ-ನಟಿಯರಿಗಷ್ಟೇ ಅಲ್ಲದೇ ಚಿತ್ರರಂಗಕ್ಕೆ ಮಾರ್ಗದರ್ಶಕರಾಗಿದ್ದರು. ಪ್ರತಿಯೊಬ್ಬರಿಗೂ ಪ್ರೀತಿ ಪಾತ್ರರಾಗಿದ್ದರು. ಇನ್ನೂ ಬಹಳಷ್ಟು ಕಾಲ ಅವರು ನಮ್ಮೊಂದಿಗೆ ಇರಬೇಕಾಗಿತ್ತು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಸಾವು ಇಂದಿಗೂ ಊಹಿಸಿಕೊಳ್ಳಲು ಆಗುವುದಿಲ್ಲ ಎಂದು ಸುಧಾರಾಣಿ ಅಂಬರೀಶ್ರನ್ನು ಸ್ಮರಿಸಿದರು. ನಟಿ ಮಯೂರಿ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 