ಹಡಗಲಿಯಲ್ಲಿ ಸರ್ವ ಧರ್ಮ ಉಚಿತ ಸಾಮೂಹಿಕ ವಿವಾಹ
All religion free mass wedding in Hadagali
ಹಡಗಲಿಯಲ್ಲಿ ಸರ್ವ ಧರ್ಮ ಉಚಿತ ಸಾಮೂಹಿಕ ವಿವಾಹ
ಹೂವಿನಹಡಗಲಿ 04: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ದೇಶಕ್ಕೆ ಅಗತ್ಯವಿದೆ ಎಂದು ಮರಿಯಮ್ಮನಹಳ್ಳಿ ಗುರುಪಾದದೇವರ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಇಲ್ಲಿನ ಎಎಂಪಿ ಅಜ್ಜಯ್ಯ ಸಮಾಜಮುಖಿ ಟ್ರಸ್ಟ್, ಮಲ್ಲಿಗೆ ಯೋಗ ಚಾರಿಟೇಬಲ್ ಟ್ರಸ್ಟ್ ಕಾಳಿಕಾದೇವಿ ಜೀರ್ಣೋದ್ಧಾರ ಸೇವಾ ಸಮಿತಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಹಿಂದೂ-ಮುಸ್ಲಿಂ ಧರ್ಮದ ಸಾಮೂಹಿಕ ಮದುವೆಗಳು ನಡೆದಿರುವುದು ಉತ್ತಮ ಬೆಳವಣಿಗೆ, ಅನ್ನ ನೀಡುವ ರೈತ ರಾಷ್ಟ್ರ ಕಟ್ಟುವ ಶಿಕ್ಷಕ, ದೇಶ ಕಾಯುವ ಸೈನಿಕ ಮೂವರಿಗೆ ಗೌರವ ಸನ್ಮಾನ ಶ್ಲಾಘನೀಯ ಎಂದರು.ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿ, ಸಾಮೂಹಿಕ ಮದುವೆಗಳು ಬಡವರಿಗೆ ಅನುಕೂಲ ಆಗುತ್ತವೆ. ಇಂತಹ ಕಾರ್ಯಕ್ರಮಗಳು ಟ್ರಸ್ಟ್ ಮೂಲಕ ನಿರಂತರವಾಗಿ ಜರುಗಲಿ ಎಂದರು.ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಸಿದ್ದವೀರ ಶಿವಾಚಾರ್ಯ ಸ್ವಾಮೀಜಿ, ಡಾ. ಹಿರಿಶಾಂತವೀರ ಸ್ವಾಮೀಜಿ, ಅಭಿನವ ಚನ್ನಬಸವ ಸ್ವಾಮಿ.ಸ್ವಾಮೀಜಿ, ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.ಜಿ.ಎಂ. ಚಂದ್ರಶೇಖರಯ್ಯ ವಿವಾಹ ಮಹತ್ವ, ಸಹಬಾಳ್ವೆ ಕುರಿತು ಉಪನ್ಯಾಸ ನೀಡಿದರು.
ಆರು ಜೋಡಿಗಳು ಉಚಿತ ಸಾಮೂಹಿಕ ವಿವಾಹದಲ್ಲಿ ಹಸೆಮಣೆ ಏರಿದರು.ಮುಖಂಡರಾದ ಕೋಡಿಹಳ್ಳಿ ಮುದುಕಪ್ಪ, ಹಣ್ಣಿ ಕೈಲಾಸನಾಥ, ಎಸ್.ಎಂ. ಅಶೋಕ, ಕೋಡಿಹಳ್ಳಿ ಕೊಟ್ರೇಶ, ಎಲ್.ಶಿವರಾಜ,ಡಾ. ಶಿವಕುಮಾರ್ಬಿ, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ರವಿ, ಮೋಹಿದ್ದೀನ್ಇತರರು ಉಪಸ್ಥಿತರಿದ್ದರು. ಎ.ಎಂ.ಪಿ. ವಾಗೀಶ್ ಪ್ರಾಸ್ತಾವಿಕ ಮಾತನಾಡಿದರು. ಹಕ್ಕಂಡಿ ಮಹಾ ದೇವಪ್ಪ, ಶಿಕ್ಷಕ ಸುರೇಶ ಅಂಗಡಿ, ಸಮಾಜ ಸೇವಕ ನಾಗರಾಜ ಗದ್ದಿಕೇರಿ ಅವರನ್ನು ಸನ್ಮಾನಿಸಲಾಯಿತು. ಜೀ ಕನ್ನಡ ಸರಿಗಮ ಖ್ಯಾತಿಯ ಶ್ರೀರಾಮ್ ಕಾಸರ, ಕನ್ನಡ ಕಿರುತರೆ ನಟಿ ರಂಜಿನಿ ರಾಘವನ್ ಸಂಗಡಿಗರ ಸಂಗೀತ ರಸಮಂಜರಿ ಕಾರ್ಯಕ್ರಮ ಜನಮನ ಸೊರೆಗೊಂಡಿತು.ಯುವರಾಜ್ ಗೌಡ್ರು, ದ್ವಾರಕೀಶ್ ರೆಡ್ಡಿ, ಎಎಂಪಿ ಸಂದೀಪ್, ಶೃತಿ ಕೆ, ನಾಗವೇಣಿ ನಿರ್ವಹಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 