ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಅಮರಿಂದರ್ ಸಿಂಗ್
Amarinder Singh
ಚಂಡೀಗಡ, ಡಿಸೆಂಬರ್ , 2- ಕರ್ತಾರ್ಪುರ ಕಾರಿಡಾರ್ ಬಗ್ಗೆ ಪಾಕಿಸ್ತಾನದ ರೈಲ್ವೆ ಸಚಿವರು ನೀಡಿರುವ ಹೇಳಿಕೆ ನಿಜವಾಗಿಯೂ ಅವರ ಕೊಳಕು ಮನಸ್ಸು , ಅಸಹ್ಯಕರ ಷಡ್ಯಂತ್ರ ಬಟ್ಟಂ ಬಯಲು ಮಾಡಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ| ಅಮರಿಂದರ್ ಸಿಂಗ್ ದೂರಿದ್ದಾರೆ .
ಪಾಕಿಸ್ತಾನದ ರೈಲ್ವೆ ಸಚಿವ ಶೇಖ್ ರಶೀದ್, ‘ಕರ್ತಾರ್ಪುರ ಯೋಜನೆ ಸೇನಾ ಮುಖ್ಯಸ್ಥರಾದ ಜನರಲ್ ಖಮರ್ ಬಜ್ವಾ ಅವರ ಕನಸಿನ ಯೋಜನೆ ದೀರ್ಘಾವಧಿಯಲ್ಲಿ ಇದು ಭಾರತಕ್ಕೆ ಮರೆಯಲಾಗದಂತಹ ಗಾಯ ಉಂಟು ಮಾಡಲಿದೆ ಎಂದಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿಂಗ್, ‘ಯೋಜನೆಯು ಜಾರಿಯಾಗಿರುವುದಕ್ಕೆ ಭಾರತ ಅಭಾರಿಯಾಗಿದೆ. ಆದರೆ, ನಮ್ಮ ನಡೆ, ಸೌಜನ್ಯವನ್ನು ಪಾಕ್ ತಪ್ಪಾಗಿ ಅರ್ಥೈಸಿಕೊಳ್ಳಬಾರದು ಎಂದೂ ಸಿಂಗ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟ್ ಪಟು ನವ ಜೋತ್ ಸಿಂಗ್ ಸಿಧು ಅವರು ಇಮ್ರಾನ್ ಖಾನ್ ಜತೆಗೆ ಹೊಂದಿರುವ ಬಾಂಧವ್ಯದ ಬಗ್ಗೆ ಎಚ್ಚರಿಕೆಯಿಂದಲೂ ಇರಬೇಕು ಎಂದೂ ಅವರು ಕಿವಿಮಾತು ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 