ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸಮಾನತೆ ಸಾರಿದ್ದಾರೆ
Ambigara Choudaiah preaches equality through his vachanas
ಯರಗಟ್ಟಿ, 21 : ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾನತೆ ಸಾರಿದ ಶರಣರಾಗಿದ್ದಾರೆ ಎಂದು ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಇದಕ್ಕೂ ಮುನ್ನ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ತಹಶೀಲ್ದಾರ ಹಾಗೂ ಸಮಾಜ ಬಾಂಧವರಿಂದ ಪೂಜೆ ಸಲ್ಲಿಸಿದರು.ಮುಖಂಡರಾದ ಉಪ ತಹಶೀಲ್ದಾರ ಸಂತೋಷ ಜಾದವ, ಶಿರಸ್ತೇದಾರ ಎಸ್. ಬಿ. ಕುಲಕರ್ಣಿ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಮಹೇಶ ಕೋಳಿ, ಗ್ರಾಮ ಆಡಳಿತಾಧಿಕಾರಿ ಎಲ್ ಬಿ ದಳವಾಯಿ, ಅಂಬಿಗೇರ ಸಮಾಜದ ಮುಖಂಡರಾದ ಮುದಕಪ್ಪ ಬಾರ್ಕಿ, ಸೋಮಪ್ಪ ಪೂಜೇರ, ಬಸವರಾಜ ಬಾರ್ಕಿ, ಮಲ್ಲಪ್ಪ ಬಾರ್ಕಿ, ಮುದ್ದಪ್ಪ ಪೂಜೇರ, ಸುನೀಲ ಸುಣಗಾರ, ಶಿವಾನಂದ ಬಾರ್ಕಿ ಸೇರಿ ಇತರರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 