ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ
Annual Award Distribution Programme
ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ
ಕಾರವಾರ, 17; ಎಜ್ಯುಕೇಶನ್ ಸೊಸೈಟಿಯ ಸುಮತಿ ದಾಮ್ಲೆ ಬಾಲಕಿಯರ ಪ್ರೌಢಶಾಲೆಯಲ್ಲಿ “ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ” ಯಶಸ್ವಿಯಾಗಿ ಜರುಗಿತು.
ಉದ್ಘಾಟಕರಾಗಿ ವಸಂತಲಕ್ಷ್ಮೀ ಎಸ್. ನಾಯ್ಕ, ಸಹಾಯಕ ಅಭಿಯಂತರರು (ವಿದ್ಯುತ್) ನೋಡಲ್ ಅಧಿಕಾರಿಗಳು, ಕೆ.ಪಿ.ಟಿ.ಸಿ.ಎಲ್. ಆಗಮಿಸಿ "ಸೋಲಿನಲ್ಲಿ ಸಹನೆ, ಸಾಧನೆಯಲ್ಲಿ ಸಮಚಿತ್ತತೆ, ನಮ್ಮದಾಗಿಸಿಕೊಳ್ಳಬೇಕು". ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಮುಖ್ಯ ಅತಿಥಿಗಳಾಗಿ ದೇವಿದಾಸ ವಿಠೋಬಾ ನಾಯ್ಕ ಆಗಮಿಸಿ, "ವಿನಯವು ಪ್ರೀತಿ ಮತ್ತು ಹೃದಯಗಳನ್ನು ಜೋಡಿಸುವ ಸೇತುವೆಯಾಗಿದೆ. ನಾವು ಪ್ರೀತಿ-ನೀತಿಗಳಿಂದ ಬದುಕಿನಲ್ಲಿ ಅಮೂಲ್ಯ ಬೆಳಕು ತುಂಬಲು ಪ್ರಯತ್ನಿಸಬೇಕು". ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.
ಸಂಸ್ಥೆಯ ಆಡಳಿತಾಧಿಕಾರಿ ಜಿ.ಪಿ. ಕಾಮತ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಥಿಗಳು ಪ್ರಾರ್ಥಿಸಿದರು. ಮುಖ್ಯಾಧ್ಯಾಪಕಿ ಶ್ರೀಮತಿ ಗಿರಿಜಾ ಎನ್. ಬಂಟ ಸ್ವಾಗತಿಸಿದರು. ಟಿ. ಎಮ್. ಶಮೀಂದ್ರ ಅತಿಥಿ ಪರಿಚಯ ಮಾಡಿದರು. ಮಾಲಿನಿ ಜೆ. ಗುರವ, ಪೂಣಿಮಾ ಮಾಂಜ್ರೇಕರ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ನಾರಾಯಣ ರಾಣೆ ವಂದಿಸಿದರು. ಸಂತೋಷ ಎಂ. ಶೇಟ್ ಕಾರ್ಯಕ್ರಮ ನಿರ್ವಹಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 