ದ್ವೇಷ ಭಾಷಣ ಮಸೂದೆಯನ್ನು ವಾಪಸ ತೆಗೆದುಕೊಳ್ಳಲು ಆಗ್ರಹಿಸಿ ತಹಸೀಲ್ದಾರರಿಗೆ ಮನವಿ
Appeal to Tehsildars demanding withdrawal of hate speech bill
ರಾಯಬಾಗ 24: ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅಂಗೀಕರಿಸಿದ ದ್ವೇಷ ಭಾಷಣ ಮಸೂದೆಯನ್ನು ವಾಪಸ ತೆಗೆದುಕೊಳ್ಳಲು ಆಗ್ರಹಿಸಿ ಬುಧವಾರ ಬಿಜೆಪಿ ಶಾಸಕ ಡಿ.ಎಮ್.ಐಹೊಳೆಯವರ ನೇತೃತ್ವದಲ್ಲಿ ತಹಸೀಲ್ದಾರ ಮಹಾದೇವ ಸನಮುರಿ ಅವರಿಗೆ ಮನವಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಶಾಸಕರು, ದ್ವೇಷ ಭಾಷಣ ಮಸೂದೆ ಕುರಿತು ವಿಧಾನ ಸಭೆಯಲ್ಲಿ ಚರ್ಚಿಸಲು ಸರಿಯಾಗಿ ಅವಕಾಶ ನೀಡದೆ,
ತರಾತುರಿಯಲ್ಲಿ ಕಾಂಗ್ರೆಸ್ ಸರ್ಕಾರ ಮಸೂದೆಯನ್ನು ಅಂಗೀಕರಿಸಿದೆ. ಎಮರ್ಜೆನ್ಸಿ ಜಾರಿಗೆ ತಂದ ಕಾಂಗ್ರೆಸ್ ಈಗ ಮತ್ತೊಂದು ಬಾರಿ ಅಂತಹದೇ ಪ್ರಯತ್ನಕ್ಕೆ ಮುಂದಾಗಿದೆ. ಈ ಬಿಲ್ ಅಂಗೀಕರಿಸಿರುವುದು ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದಂತೆ ಆಗಿದೆ ಎಂದರು.ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಸದಾಶಿವ ಘೋರೆ್ಡ, ಬಸವರಾಜ ದೋಣವಾಡೆ, ಸಂಗಣ್ಣ ದತ್ತವಾಡೆ, ಮಹೇಶ ಕರಮಡಿ, ರಂಜಾನ ಮಕಾನದಾರ, ಬೋಲಾ ಕಡಾಳೆ, ಸುಭಾಷ ಕಾಂಬಳೆ, ಭಾರತಿ ಲೋಹಾರ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 