ಅಧ್ಯಕ್ಷರಾಗಿ ತಹಶೀಲದಾರ, ಉಪಾಧ್ಯಕ್ಷರಾಗಿ ಕಿತ್ತೂರ ಆಯ್ಕೆ
ದಿ. ಗೋಕಾಕ ಉಪ್ಪಾರರ ಔದ್ಯೋಗಿಕ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಜರುಗಿತು.
ಗೋಕಾಕ 30: ನಗರದ ದಿ. ಗೋಕಾಕ ಉಪ್ಪಾರರ ಔದ್ಯೋಗಿಕ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯು ದಿ.28ರಂದು ಸಂಘದ ಕಾಯರ್ಾಲಯದಲ್ಲಿ ಜರುಗಿತು.
ಅಧ್ಯಕ್ಷರಾಗಿ ಗಣಪತಿ ದುರ್ಗಪ್ಪ ತಹಶೀಲದಾರ ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮವ್ವ ಬಿ.ಕಿತ್ತೂರ ಆಯ್ಕೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು ಯಲ್ಲಪ್ಪ ಎಲ್ ಹೆಜ್ಜೆಗಾರ ಮತ್ತು ಗಣಪತಿ ದುರ್ಗಪ್ಪ ತಹಶೀಲದಾರ ನಾಮಪತ್ರ ಸಲ್ಲಿಸಿದ್ದು ಹೆಜ್ಜೆಗಾರ ಅವರು 3 ಮತಗಳು ಪಡೆದರೆ ತಹಶೀಲದಾರ ಅವರು 8 ಮತಗಳನ್ನು ಪಡೆದುಕೊಂಡು ಆಯ್ಕೆಗೊಂಡರು, ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಲಕ್ಷ್ಮವ್ವ ಬಿ.ಕಿತ್ತೂರ ಅವರು ಅವಿರೋಧವಾಗಿ ಆಯ್ಕೆಗೊಂಡರು ಎಂದು ಚುನಾವಣಾಧಿಕಾರಿ ಐ.ಎ.ಬೆಟಗೇರಿ ತಿಳಿಸಿದರು.
ಸದಸ್ಯರುಗಳಾದ ನಿಂಗಪ್ಪ ಹುಳ್ಳಿ, ಬಸಪ್ಪ ರಂಕನಕೊಪ್ಪ, ಬಸವರಾಜ ಶಿಂಗಳಾಪೂರ, ಮಾಯಪ್ಪ ತಹಶೀಲದಾರ, ಮಾರುತಿ ಜಡೆನ್ನವರ, ಯಲ್ಲಪ್ಪ ಹೆಜ್ಜೆಗಾರ, ಮಾರುತಿ ಸಾತಪ್ಪಗೋಳ, ಯಲ್ಲವ್ವ ಖಾನಪ್ಪನವರ, ಲಕ್ಷ್ಮಣ ಪಾತ್ರೋಟ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 