ನೆರೆ ಸಂತ್ರಸ್ಥರಿಗೆ ಸೌಲಭ್ಯದ ಭರವಸೆ
ಗದಗ 07: ಮಲಪ್ರಭಾ ನದಿ ಹಾಗೂ ಬೆಣ್ಣಿಹಳ್ಳ ಪ್ರವಾಹದಿಂದ ಹಾನಿಗೊಳಗಾಗುವ ಗ್ರಾಮಗಳ ಜನ ಜಾನುವಾರುಗಳ ಸುರಕ್ಷತೆಗಾಗಿ ಜಿಲ್ಲಾಡಳಿತವು ಸಧ್ಯ ಕೊಣ್ಣೂರಿನಲ್ಲಿ ತೆರಯಲಾಗಿರುವ ಪರಿಹಾರ ಕೇಂದ್ರ ಒಂದಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ನರಗುಂದ ಶಾಸಕ ಸಿ.ಸಿ.ಪಾಟೀಲ ಭೇಟಿ ನೀಡಿ ಮಹಿಳೆಯರಿಗೆ ಹಾಗೂ ನೆರೆ ಸಂತ್ರಸ್ಥರಿಗೆ ಧೈರ್ಯ ಹೇಳಿದರು. ಪರಿಹಾರ ಕೇಂದ್ರಗಳಲ್ಲಿ ಯಾವುದೇ ರೀತಿ ಲೋಪವಾಗದಂತೆ ಸಂತ್ರಸ್ಥರಿಗೆ ಊಟ, ವಸತಿ, ವೈದ್ಯಕೀಯ ಸೌಲಭ್ಯ ಹಾಗೂ ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ನರಗುಂದ ತಹಶೀಲ್ದಾರ ಕೋರಿಶೆಟ್ಟರ, ತಾ,ಪಂ. ಕಾರ್ಯನಿರ್ವಾಹಕ ಅಧಿಕಾರಿ ಕನಕರೆಡ್ಡಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಪರಿಹಾರ ಕೇಂದ್ರಗಳ ವಿವರ: ರೋಣ ತಾಲೂಕಿನ ಕುರುವಿನಕೊಪ್ಪ, ಮೆಣಸಗಿ, ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಎ.ಪಿ.ಎಮ್.ಸಿ ಕಟ್ಟಡ, ಕೆ.ಇ.ಎಸ್. ಪ್ರೌಢಶಾಲೆ ಹಾಗೂ ಬೂದಿಹಾಳ, ವಾಸನ ಗ್ರಾಮಗಳಲ್ಲಿ ಸಂತ್ರಸ್ಥರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 