ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ
Attention students and parents
ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ
ಗದಗ 17: ಗದಗ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08372-238042 ನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 