ವಿಶೇಷ ಚೇತನ ಮಕ್ಕಳಿಗೆ ಅರಿವು ಮತ್ತು ಕ್ರೀಡೆ ಕಾರ್ಯಕ್ರಮ
Awareness and sports program for children with special needs
ತಾಳಿಕೋಟೆ 24 : ಪಟ್ಟಣದ ಆಶ್ರಯ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಅರಿವು ಮತ್ತು ಕ್ರೀಡೆ ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಬಿಎಸ್.ಸಾವಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಮಕ್ಕಳ ಜೊತೆ ಶಿಕ್ಷಣ ಹಾಗೂ ಇತರ ಅವಕಾಶಗಳನ್ನು ನೀಡಿ ಆತ್ಮವಿಶ್ವಾಸವನ್ನು ತುಂಬುವ ಕೆಲಸವಾಗಬೇಕು ಎಂದು ತಿಳಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ.ದಮ್ಮೂರಮಠ, ಮುಖ್ಯಶಿಕ್ಷಕ ಎಂ.ಬಿ.ನಾಗೂರಎಸ್ಡಿಎಂಸಿ ಅಧ್ಯಕ್ಷ ದಸ್ತಗೀರ ಯಕೀನ, ಬಿಐಆರ್ಟಿ.ಎಸ್. ಎಸ್ ರಾಮತಾಳ, ಆರ್.ಎಚ್.ಢವಳಗಿ, ಕೆ.ಎಸ್.ಸಜ್ಜನ್, ಸಿಆರ್ಿಗಳು ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಘು ಆಟಗಳನ್ನು ಲಘು ಮನರಂಜನಾ ಕಾರ್ಯಕ್ರಮಗಳನ್ನು ಏರಿ್ಡಸಿ ಅವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 