ಕುಷ್ಠರೋಗ ಕುರಿತು ಜಾಗೃತಿ ಅಗತ್ಯವಾಗಿದೆ: ಮುನಿರಾಜು
ಹಾವೇರಿ22: ಜನರಿಗೆ ಕುಷ್ಠ ರೋಗದ ಬಗ್ಗೆ ಸರಿಯಾದ ಮಾಹಿತಿ ಕೊರತೆಯಿಂದ ರೋಗಿ ಅಂಗವಿಕಲತೆಗೆ ಒಳಗಾಗುತ್ತಿದ್ದಾರೆ. ಕುಷ್ಠರೋಗದ ಕುರಿತು ಅರಿವು ಮೂಡಿಸುವ ಮೂಲಕ ಕುಷ್ಠರೋಗ ಮುಕ್ತ ರಾಜ್ಯವನ್ನಾಗಿ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಬೆಂಗಳೂರು ಕುಷ್ಠರೋಗ ವಿಭಾಗದ ಜಂಟಿ ನಿದರ್ೆಶಕ ಡಾ.ಕೆ.ಎಂ.ಮುನಿರಾಜು ಅವರು ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ವೈದ್ಯಾಧಿಕಾರಿಗಳಿಗೆ ಹಾಗೂ ಆರೋಗ್ಯ ಸಹಾಯಕರಿಗೆ ಆಯೋಜಿಸಲಾದ ಕುಷ್ಠರೋಗದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಹದ ಮೇಲೆ ತಿಳಿ ಬಿಳ್ಳಿ ಬಣ್ಣದ ಮಚ್ಚೆಗಳು ಕಂಡುಬಂದರೆ ಆ ಭಾಗಗಳಲ್ಲಿ ಯಾವುದೇ ಸ್ಪರ್ಶ ಜ್ಞಾನವಿಲ್ಲದಿದ್ದರೆ ಹಾಗೂ ನರಗಳಲ್ಲಿ ಉತ ಕಂಡುಬಂದರೆ ಸಾರ್ವಜನಿಕರು ತಕ್ಷಣ ಹತ್ತಿರದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಂಡು ರೋಗವನ್ನು ಖಚಿತ ಪಡಿಸಿಕೊಳ್ಳಬೇಕು. ಕುಷ್ಠರೋಗದಲ್ಲಿ ಪಿಬಿ ಮತ್ತು ಎಂ.ಬಿ ಎರಡು ವಿಧಗಳಿವೆ. ಪಿಬಿ ಮೊದಲ ಹಂತವಾಗಿದ್ದು ಆರು ತಿಂಗಳ ಚಿಕಿತ್ಸೆ ನೀಡಲಾಗುತ್ತದೆ. ಎಂ.ಬಿ. ಎರಡನೇ ಹಂತವಾಗಿದ್ದು 12 ತಿಂಗಳ ಚಿಕಿತ್ಸೆಯನ್ನು ನೀಡಲಾಗುತ್ತದೆ. ಮೊದಲ ಹಂತದಲ್ಲಿದ್ದಾಗ ಚಿಕಿತ್ಸೆ ಪಡೆದರೆ ಅಂಗವಿಕಲತೆ ತಪ್ಪಿಸಬಹುದು ಎಂದು ಹೇಳಿದರು.
ಆಶಾ ಕಾರ್ಯಕತರ್ೆಯರು ಮನೆ ಮನೆಗೆ ಭೇಟಿ ನೀಡಿ ಕುಷ್ಠರೋಗದ ಕುರಿತು ಅರಿವು ಮೂಡಿಸಬೇಕು. ಸಂಶಯಾಸ್ಪದ ರೋಗದ ಲಕ್ಷಣಗಳು ಕಂಡುಬಂದವರನ್ನು ವೈದ್ಯರ ಬಳಿ ತಪಾಸಣೆಗೆ ಕರೆದೊಯ್ದು ಸೂಕ್ತ ಕೊಡಿಸಬೇಕು. ಕುಷ್ಠರೋಗಿಗಳಿಗೆ ಉಚಿತವಾಗಿ ಜಾಗ, ಮನೆ ಇನ್ನೂ ಹಲವಾರು ಸೌಲಭ್ಯಗಳನ್ನು ಸಕರ್ಾರ ನೀಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿಮರ್ೂಲನಾ ಅಧಿಕಾರಿ ಡಾ.ಸತೀಶ ಎ.ಆರ್. ಅವರು ಮಾತನಾಡಿ, ಕುಷ್ಠರೋಗಿಗಳ ಸಂಖ್ಯೆ ಕಡಿಮೆಮಾಡಲು ಮೊದಲ ಹಂತದಲ್ಲೇ ರೋಗಿಯನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಿ ರೋಗ ಮತ್ತೊಬ್ಬರಿಗೆ ಹರಡದಂತೆ ತಡೆಗಟ್ಟಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಮನೋವೈದ್ಯ ಡಾ.ವಿಜಯಕುಮಾರ ಬಳಿಗಾರ ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 