ಜ.4 ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ
Ayyappa Swamy Mahapooja on January 4th
ತಾಳಿಕೋಟಿ 01: ಪಟ್ಟಣದಲ್ಲಿ ಜ4. ಶನಿವಾರರಂದು ಬೆಳಿಗ್ಗೆ 7ಗಂಟೆಯಿಂದ ದರಾಬಾರಿ ಮಠದಿಂದ ವಿವಿಧ ವಿಶೇಷ ವಾದ್ಯಗಳೊಂದಿಗೆ ರಾಜವಾಡೆ, ಕತ್ರಿ ಬಜಾರ ಮೂಲಕ ವಿಠ್ಠಲ ಮಂದಿರದವರೆಗೆ ಅಯ್ಯಪ್ಪ ಸ್ವಾಮಿಯ ಗಂಗಸ್ಥಳ ಕಾರ್ಯಕ್ರಮ ನೆರವೇರುವುದು. ಅಂದೇ ಮಧ್ಯಾಹ್ನ 12 ಗಂಟೆಯಿಂದ ವಿಠ್ಠಲ ಮಂದಿರ ದೇವಸ್ಥಾನದಲ್ಲಿ ಮಹಾಪ್ರಸಾದ ಇರುವುದು ಹಾಗೂ ಸಾಯಂಕಾಲ 5ಗಂಟೆಗೆ ನಗರೇಶ್ವರ ದೇವಸ್ಥಾನದಿಂದ ಅಯ್ಯಪ್ಪ ಸ್ವಾಮಿ ಪೂಜಾ ಸ್ಥಳದವರೆಗೆ ಬಾಲಕ ಮತ್ತು ಬಾಲಕಿಯರಿಂದ ಜ್ಯೋತಿ ತರುವ ಕಾರ್ಯಕ್ರಮ ಇರುತ್ತದೆ. ಆದ್ದರಿಂದ ಎಲ್ಲ ತಾಯಂದಿರು ತಮ್ಮ ತಮ್ಮ ಮಕ್ಕಳನ್ನು ಸರಿಯಾಗಿ 4 ಗಂಟೆಗೆ ನಗರೇಶ್ವರ ದೇವಸ್ಥಾನಕ್ಕೆ ಕರೆದುಕೊಂಡು ಬರಬೇಕು ಹಾಗೂ ಸಾಯಂಕಾಲ 6ಗಂಟೆಯಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ವಿಠ್ಠಲ ಮಂದಿರದ ಮುಂಭಾಗದಲ್ಲಿ ನೆರೆವೆರುವುದು. ಅಲ್ಲಿಗೆ ಎಲ್ಲ ಭಕ್ತರು ಬಂದು ಅಯ್ಯಪ್ಪ ಸ್ವಾಮಿ ಕೃಪೆಗೆ ಪಾತ್ರರಾಗಬೇಕಾಗಿ ಸಮಿತಿಯ ಪ್ರಕಟಣೆ ಕೇಳಿಕೊಂಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 