ಜ.4 ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ
Ayyappa Swamy Mahapooja on January 4th
ತಾಳಿಕೋಟಿ 01: ಪಟ್ಟಣದಲ್ಲಿ ಜ4. ಶನಿವಾರರಂದು ಬೆಳಿಗ್ಗೆ 7ಗಂಟೆಯಿಂದ ದರಾಬಾರಿ ಮಠದಿಂದ ವಿವಿಧ ವಿಶೇಷ ವಾದ್ಯಗಳೊಂದಿಗೆ ರಾಜವಾಡೆ, ಕತ್ರಿ ಬಜಾರ ಮೂಲಕ ವಿಠ್ಠಲ ಮಂದಿರದವರೆಗೆ ಅಯ್ಯಪ್ಪ ಸ್ವಾಮಿಯ ಗಂಗಸ್ಥಳ ಕಾರ್ಯಕ್ರಮ ನೆರವೇರುವುದು. ಅಂದೇ ಮಧ್ಯಾಹ್ನ 12 ಗಂಟೆಯಿಂದ ವಿಠ್ಠಲ ಮಂದಿರ ದೇವಸ್ಥಾನದಲ್ಲಿ ಮಹಾಪ್ರಸಾದ ಇರುವುದು ಹಾಗೂ ಸಾಯಂಕಾಲ 5ಗಂಟೆಗೆ ನಗರೇಶ್ವರ ದೇವಸ್ಥಾನದಿಂದ ಅಯ್ಯಪ್ಪ ಸ್ವಾಮಿ ಪೂಜಾ ಸ್ಥಳದವರೆಗೆ ಬಾಲಕ ಮತ್ತು ಬಾಲಕಿಯರಿಂದ ಜ್ಯೋತಿ ತರುವ ಕಾರ್ಯಕ್ರಮ ಇರುತ್ತದೆ. ಆದ್ದರಿಂದ ಎಲ್ಲ ತಾಯಂದಿರು ತಮ್ಮ ತಮ್ಮ ಮಕ್ಕಳನ್ನು ಸರಿಯಾಗಿ 4 ಗಂಟೆಗೆ ನಗರೇಶ್ವರ ದೇವಸ್ಥಾನಕ್ಕೆ ಕರೆದುಕೊಂಡು ಬರಬೇಕು ಹಾಗೂ ಸಾಯಂಕಾಲ 6ಗಂಟೆಯಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ವಿಠ್ಠಲ ಮಂದಿರದ ಮುಂಭಾಗದಲ್ಲಿ ನೆರೆವೆರುವುದು. ಅಲ್ಲಿಗೆ ಎಲ್ಲ ಭಕ್ತರು ಬಂದು ಅಯ್ಯಪ್ಪ ಸ್ವಾಮಿ ಕೃಪೆಗೆ ಪಾತ್ರರಾಗಬೇಕಾಗಿ ಸಮಿತಿಯ ಪ್ರಕಟಣೆ ಕೇಳಿಕೊಂಡಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 