ಅಯ್ಯಪ್ಪಸ್ವಾಮಿ ಸನಿಧಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ
ಲೋಕದರ್ಶನ ವರದಿ
ಮೂಡಲಗಿ 17: ಶಬರಿಮಲೆ ಅಯ್ಯಪ್ಪಸ್ವಾಮಿ ಸನಿಧಾನಕ್ಕೆ ಮಹಿಳೆಯರ ಪ್ರವೇಶ ನಿಷೇಧಿಸಲು ಆಗ್ರಹಿಸಿ ಅಯ್ಯಪ್ಪ ಸ್ವಾಮಿ ಭಕ್ತರು ಕಲ್ಮೇಶ್ವರ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ ಕಛೇರಿಯ ಶಿರಸ್ತೆದಾರ ರಾಜು ಕಡಕೋಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
800 ವರ್ಷಗಳ ಇತಿಹಾಸವಿರುವ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವಂತೆ ಸವರ್ೋಚ್ಚನ್ಯಾಯಾಲಯ ನೀಡಿದ ತೀಪರ್ಿನಿಂದ ಸಹಸ್ರ ಕೋಟಿ ಭಕ್ತ ಸಮೂಹದ ಮನಸ್ಸಿಗೆ ಆಘಾತ ಉಂಟುಮಾಡಿದೆ, ನ್ಯಾಯಾಲಯವು ತಮ್ಮ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು.
ಖಾನಟ್ಟಿಯ ಬಸವಾನಂದ ಸ್ವಾಮಿಗಳು ಮಾತನಾಡಿ, ಶಬರಿಮಲೆ ಅಯ್ಯಪ್ಪಸ್ವಾಮಿ ಸನಿಧಾನಕ್ಕೆ ಪ್ರವೇಶ ನೀಡುವುದಿದ್ದರೇ, ಹತ್ತು ವರ್ಷದೊಳಗಿನ ಕುವರಿಯರಿಗೆ ಹಾಗೂ ಐವತ್ತು ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರವೇಶ ನೀಡಬೇಕು. ಇಲ್ಲವಾದಲ್ಲಿ ದೇಶದ್ಯಾಂತ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವದು ಎಂದರು.
ಪುರಸಭೆ ಸದಸ್ಯ ಸಂತೋಷ ಸೋನವಾಲ್ಕರ, ಗುರುಸ್ವಾಮಿ ರವಿ ನೇಸೂರ, ಸಂಜೀವ ಶೆಟ್ಟಿ, ಈಶ್ವರ ಗೋಲಶೆಟ್ಟಿ, ಸುರೇಶ ಸವಸುದ್ದಿ, ಸುರೇಶ ಪತ್ತಾರ, ಸುಧೀರ ನಾಯರ್, ಚೇತನ ನಿಶಾನಿಮಠ, ಸದಾಶಿವ ನಿಡಗುಂದಿ, ಕುಮಾರ ಗಿರಡ್ಡಿ, ಚನಬಸು ಝಂಡೇಕುರಬರ, ಎಮ್.ಎಸ್.ಮೂಗಳಖೋಡ ಹಾಗೂ ಗುಲರ್ಾಪೂರ, ಕಂಕಣವಾಡಿ, ಹಳ್ಳೂರ, ತುಕ್ಕನಟ್ಟಿಯ ಭಕ್ತರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 