ಕಂಪ್ಲಿಯಲ್ಲಿ ಬಡೇ ಸಾಹೇಬ್ ದರ್ಗಾ ಉರುಸ್-ಎ-ಷರೀಫ್ ಕಾರ್ಯಕ್ರಮ
Bade Saheb Dargah Urus-e-Sharif program at Kampli
ಕಂಪ್ಲಿಯಲ್ಲಿ ಬಡೇ ಸಾಹೇಬ್ ದರ್ಗಾ ಉರುಸ್-ಎ-ಷರೀಫ್ ಕಾರ್ಯಕ್ರಮ
ಕಂಪ್ಲಿ 12: ಪಟ್ಟಣದ ಹಜರತ್ ಸೈಯದ್ ಷಾ ಬಡೇ ಸಾಹೇಬ್ ಖಾದ್ರಿ ಮತ್ತು ಹಜರತ್ ಸೈಯದ್ ಷಾ ದಿವಾನೆ ಸಾಹೇಬ್ ಖಾದ್ರಿ ದರ್ಗಾದಲ್ಲಿ ಮೂರು ದಿನಗಳ ಕಾಲ ನಡೆಯುವ 237ನೇ ಉರುಸ್ ಕಾರ್ಯಕ್ರಮದಲ್ಲಿ ಎರಡನೇ ದಿನ ಉರುಸ್ ಕಾರ್ಯಕ್ರಮ ಜರುಗಿತು. ಪೀಠಾಧಿಪತಿಗಳಾದ ಸೈಯದ್ ಷಾ ಅಬುಲ್ ಹಸನ್ ಖಾದ್ರಿ ಉರುಫ್ ಅಜಂ ಸಾಹೇಬ್ ಸಜ್ಜಾದೆ ನಸೀನ್ ದಿವಾನೆಖಾನೆ ಗುರುಗಳ ಮನೆಯಿಂದ ಬೆಳಗಿನ ಜಾವ ಗಂಧವನ್ನು ಮೆರವಣಿಗೆ ಮೂಲಕ ತಂದು ದರ್ಗಾದಲ್ಲಿ ಸಮರ್ಿಸಿದರು. ಉರುಸ್ ಕಾರ್ಯಕ್ರಮದಲ್ಲಿ ಎರಡನೇ ದಿನದ ಕಾರ್ಯಕ್ರಮದಲ್ಲಿ ಧರ್ಮಗುರುಗಳೊಂದಿಗೆ ಮುಸ್ಲಿಂ ಬಾಂಧವರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿ ಪ್ರಾರ್ಥನೆಯನ್ನು ಸಲ್ಲಿಸಿದರು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ನಂತರ ಅನ್ನಸಂತರೆ್ಣ ನಡೆಯಿತು. ಜ.13ರಂದು ಜಿಯಾರತ್ ಮತ್ತು ಪಲ್ಲಕ್ಕಿ ಉತ್ಸವ ದರ್ಗಾದಿಂದ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬೆಳಗೋಡುಹಾಳು ಅಗಸಿಯ ಹತ್ತಿರದ ದಿವಾನ್ಖಾನೆ ಮಸೀದಿಯಲ್ಲಿ ಮುಕ್ತಾಯಗೊಳ್ಳಲಿದ್ದು, ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದೆಂದು ದರ್ಗಾ ಸಂಸ್ಥಾನ ಮಂಡಳಿ ಸದಸ್ಯರು ತಿಳಿಸಿದರು. ಜ.003: 237ನೇ ಉರುಸ್-ಎ-ಷರೀಫ್ ಕಾರ್ಯಕ್ರಮದ ಅಂಗವಾಗಿ ಬಡೇ ಸಾಬ್ ದರ್ಗಾದಲ್ಲಿ ಮುಸ್ಲಿಂ ಧರ್ಮ ಗುರುಗಳು ಹಾಗೂ ಪೀಠಾಧಿಪತಿಗಳಾದ ಸೈಯದ್ ಷಾ ಅಬುಲ್ ಹಸನ್ ಖಾದ್ರಿ ಉರುಫ್ ಅಜಂ ಸಾಹೇಬ್ ಸಜ್ಜಾದೆ ನಸೀನ್ ದಿವಾನೆಖಾನೆ ಗುರುಗಳು ಪ್ರಾರ್ಥನೆ ಸಲ್ಲಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 