ಜೆಎಸ್ಡಬ್ಲ್ಯೂ ಟೌನ್ಶಿಪ್ನಲ್ಲಿ ಕರಡಿ ಸೆರೆ
Bear captured in JSW Township
ಬಳ್ಳಾರಿ 26: ಸಂಡೂರಿನ ತೋರಣಗಲ್ಲಿನ ಜೆಎಸ್ಡಬ್ಲ್ಯೂ ಟೌನ್ಶಿಪ್ ನಲ್ಲಿ ಹಲವಾರು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದ ಕರಡಿಯನ್ನು ಮಂಗಳವಾರ ಸೆರೆ ಹಿಡಿಯಲಾಗಿದೆ.ಬೆಂಗಳೂರಿನ ಮುಖ್ಯ ವನ್ಯಜೀವಿ ಪರಿಪಾಲಕರ ಅನುಮತಿ ಮೇರೆಗೆ ಬಳ್ಳಾರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಂಡೂರು ಪಶು ವೈದ್ಯಾಧಿಕಾರಿಗಳ ಸಮಕ್ಷಮದಲ್ಲಿ ಸೆರೆ ಹಿಡಿಯಲಾಗಿದೆ.ಬನ್ನೇರುಘಟ್ಟ ವನ್ಯಜೀವಿ ಕರಡಿ ರಕ್ಷಣಾ ಕೇಂದ್ರ ಸಹಕಾರದೊಂದಿಗೆ ಅರವಳಿಕೆ ನೀಡಿ ಜಿಪಿಎಸ್ ಆಧಾರಿತ ರೇಡಿಯೋ-ಕಾಲರ್ ಐಡಿ ಅಳವಡಿಸಿ ಬೆಂಗಳೂರಿನ ಮುಖ್ಯ ವನ್ಯಜೀವಿ ಪರಿಪಾಲಕರ ಅನುಮತಿ ಪಡೆದು ಸೂಕ್ತವಾದ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದೆ.ಕಾರ್ಯಾಚರಣೆಯನ್ನು ವಲಯ ಅರಣ್ಯಾಧಿಕಾರಿ, ಸಂಡೂರು ದಕ್ಷಿಣ ವಲಯ ಹಾಗೂ ಸಿಬ್ಬಂದಿಯವರು ಜೊತೆಗೂಡಿ ಕಾರ್ಯಗತಗೊಳಿಸಿದ್ದಾರೆ ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ ಅವರು ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 