ಕುಂಭಮೇಳದೊಂದಿಗೆ ಬೀರದೇವರ ಪಲ್ಲಕ್ಕಿ ಮೆರವಣಿಗೆ
ಮಾಂಜರಿ 06: ಯಕ್ಸಂಬಾ ಪಟ್ಟಣದ ಕರ್ಲಹೊಂಡಲಿಂಗೇಶ್ವರ ಯಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಬೀರದೇವರ ಪಲ್ಲಕ್ಕಿ ಮೆರವಣಿಗೆ ಮತ್ತು 111 ಸುಮಂಗಲೆಯರಿಂದ ಕುಂಭಮೇಳದ ಮೆರವಣಿಗೆ ಜರುಗಿತು.
ಗ್ರಾಮದ ಬೀರದೇವರ ಮಂದಿರದಲ್ಲಿ ಕುಂಭಮೇಳಕ್ಕೆ ಚಾಲನೆ ದೊರಕಿತು. ನಂತರ ಪಟ್ಠಣದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳದೊಂದಿಗೆ ಕುಂಭಮೇಳ ಜರುಗಿತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಂಭಮೇಳಕ್ಕೆ ಮೆರಗು ತಂದರು. ನಂತರ ಮೆರವಣಿಗೆಯು ಕರ್ಲಹೊಂಡಲಿಂಗೇಶ್ವರ ಮಂದಿರಕ್ಕೆ ತೆರಳಿ ಮಂಗಲಗೊಂಡಿತು. ನಂತರ ರುದ್ರಾಭಿಷೇಕ ಮತ್ತು ನೈವೆದ್ಯ ಕಾರ್ಯಕ್ರಮ ಜರುಗಿತು.
ಮಹೇಶ ಬಾಕಳೆ, ಮಲ್ಲಪ್ಪಾ ಗಿಡ್ಡ, ಮಹಾಂತೇಶ ಕಬಾಡೆ, ಮಲ್ಲಪ್ಪಾ ಕಬಾಡೆ, ಶ್ರವಣ ರಾಯಮಾನೆ, ಭಾಲಚಂದ್ರ ಸಪ್ತಸಾಗರೆ, ಅಜೀತ ನಾವಲಗೇರ, ರವಿ ಹಿಟಣೆ, ಪುಂಡಲಿಕ ಸಾತ್ವರ, ಅಂಕುಶ ಮಾಳಿ, ಮಹಾಂತೇಶ ವಸ್ತ್ರದ, ಭೀಮು ಬಾಕಳೆ, ರಾಹುಲ ನಾಯಿಕ, ನವೀನ ಹುನ್ನರಗಿ, ಸೇರಿದಂತೆ ಗ್ರಾಮಸ್ಥರು, ಅನ್ನದಾನ ಸಮೀತಿ ಹಾಗೂ ಯಾತ್ರಾ ಸಮಿತಿಯ ಸದಸ್ಯರು, ವಿವಿಧ ಯುವಕ ಮಂಡಳದ ಸದಸ್ಯರು, ಮಹೀಳೆಯರು ಪಲ್ಲಕ್ಕಿ ಮೆರವಣಿಗೆ ಮತ್ತು ಕುಂಭಮೇಳದಲ್ಲಿ ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 