ಬೆಳಗಾವಿ: ಜೈನ ಕಾಲೇಜ್ ವತಿಯಿಂದ ಎನ್ಎಸ್ಎಸ್ ಶಿಬಿರ
ಲೋಕದರ್ಶನ ವರದಿ
ಬೆಳಗಾವಿ02: ನಗರದ ಜೆಜಿಐ ಸಂಸ್ಥೆಯ ಜೈನ ಬಿಬಿಎ, ಬಿಸಿಎ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್. ಘಟಕದ ವತಿಯಿಂದ ಇತ್ತೀಚೆಗೆ ಖಾನಾಪೂರ ತಾಲೂಕಿನ ರೂಮೆವಾಡಿ ಗ್ರಾಮದಲ್ಲಿ ಒಂದುವಾರದ ವರೆಗೆ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಶಿಬಿರದಲ್ಲಿ ವಿದ್ಯಾಥರ್ಿ ಗಳಿಂದ ಗ್ರಾಮದ ಸ್ವಚ್ಛತೆ, ರಸ್ತೆ ಸುಧಾರಣೆ ಮಾಡಲಾಯಿತು. ಗ್ರಾಮದ ಪ್ರಾಥಮಿಕ ಶಾಲೆಯ ಸೌಂದರೀಕರಣ ಹಾಗೂ ಸುಣ್ಣಬಣ್ಣ ಬಳೆಯಲಾಯಿತು. ಒಂದು ದಿನ ಗ್ರಾಮದ ಜನತೆ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾಥರ್ಿಗಳಿಗೆ ವೇಣುಗ್ರಾಮ ಆಸ್ಪತ್ರೆಯ ವೈದ್ಯರಿಂದ ವೈದ್ಯಕೀಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಶಿಬಿರದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಸರಿಸೃಪಗಳ ಬಗ್ಗೆ ಮಾಹಿತಿ ನೀಡಲಾಯಿತು. ವಿಶೇಷವಾಗಿ ವಿವಿಧ ಹಾವುಗಳ ಪರಿಚಯ ಹಾಗೂ ವಿಷಕಾರಿ ಹಾವುಗಳ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಉರಗತಜ್ಞ ಆನಂದ ಚಿಟ್ಟಿ ಮಾಹಿತಿ ನೀಡಿದರು.
ಸಾಮಾಜಿಕ ಕಾರ್ಯ ಕತರ್ೆ ನಾಗರತ್ನ ರಾಮಗೌಡ ಅವರು ಶಿಬಿರಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಚಾರ್ಯ ಸುನಿಲ ದೇಸಾಯಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಎನ್ ಎಸ್. ಎಸ್. ಘಟಕದ ಅಧಿಕಾರಿ ಚಿದಂಬರ ಇನಾಮದಾರ ಶಿಬಿರದ ಉಸ್ತುವಾರಿ ವಹಿಸಿದ್ದರು. ಸಿದ್ಧಾರ್ಥ ಚೌರಿ ಶಿಬರಕ್ಕೆ ಸಹಾಯಕರಾಗಿ ಕಾರ್ಯನಿರ್ವಹಿಸಿದರು. ಜೈನ ಕಾಲೇಜಿನ 50 ವಿದ್ಯಾರ್ಥಿಗಳ ಶಿಬಿರದಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 