ಬಳ್ಳಾರಿ: ಇಂದು ವೈ.ದೇವೇಂದ್ರಪ್ಪಗೆ ಅಭಿನಂದನೆ
ಬಳ್ಳಾರಿ 10: ಕಳೆದ ಸಂಸತ್ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದಿಸಿ ವಿಜೇತರಾದ ವೈ.ದೇವೇಂದ್ರಪ್ಪ ಅವರಿಗೆ ಪಕ್ಷದಿಂದ ಜೂ.10ರಂದು ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಹರಗೌಡ, ನಗರ ಘಟಕದ ಅಧ್ಯಕ್ಷ ಶ್ರೀನಿವಾಸ್ ಮೋತ್ಕರ್, ಬಿಜೆಪಿ ಮುಖಂಡರಾದ ವೀರಶೇಖರ್ ರೆಡ್ಡಿ ಅವರು ವೈ.ದೇವೇಂದ್ರಪ್ಪ ಅಭಿನಂದನಾ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಜಗಧೀಶ್ ಶೆಟ್ಟರ್, ಬಳ್ಳಾರಿ ಜಿಲ್ಲಾ ಚುನಾವಣಾ ಉಸ್ತುವಾರಿಗಳೂ ಆಗಿದ್ದ ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು, ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ, ಎನ್ವೈ ಗೋಪಾಲಕೃಷ್ಣ, ಎಂಎಸ್ ಸೋಮಲಿಂಗಪ್ಪ, ಜಿಲ್ಲಾ ಚುನಾವಣಾ ಸಂಚಾಲಕ ಮೃತ್ಯುಂಜಯ ಜಿನಗಾ, ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ಧಾರೆ.
ರಾಷ್ಟ್ರೀಯ ಪರಿಷತ್ ಸದಸ್ಯರು, ರಾಜ್ಯ ಪರಿಷತ್ ಸದಸ್ಯರು, ರಾಜ್ಯದ ಪ್ರಮುಖ ನಾಯಕರೂ ಸಹ ಪಾಲ್ಗೊಳ್ಳಲಿದ್ದಾರೆ. ಎಲ್ಲ ಬಿಜೆಪಿ ಕಾರ್ಯಕರ್ತರು ಈ ಅಭಿನಂದನಾ ಸಮಾವೇಶಕ್ಕೆ ಆಗಮಿಸಬೇಕೆಂದು ಕೋರಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 