ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಧನ: ಪರಿಹಾರ ವಿತರಣೆ
ಲೋಕದರ್ಶನ ವರದಿ
ಬಳ್ಳಾರಿ 19: ಲೋಕಸಭಾ ಚುನಾವಣಾ-2019ರಲ್ಲಿ ಕರ್ತವ್ಯನಿರತರಾಗಿದ್ದ ಸಂದರ್ಭದಲ್ಲಿ ನಿಧನ ಹೊಂದಿದ 3 ಜನ ನೌಕರರ ಕುಟುಂಬದ ವಾರಸುದಾರರಿಗೆ ಪ್ರಭಾರ ಜಿಲ್ಲಾಧಿಕಾರಿ ಕೆ.ನಿತೀಶ್ ಅವರು ಪರಿಹಾರಧನ ವಿತರಿಸಿದರು.
ಸಿರಗುಪ್ಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಿ.ರಮೇಶ ಗುರುಸಿದ್ದಪ್ಪ ನಿಧನರಾದ ಪ್ರಯುಕ್ತ ಸದರಿಯವರ ಪತ್ನಿ ಬಿ.ಮಂಜುಳಾ ಅವರಿಗೆ 15ಲಕ್ಷ ರೂ.ಗಳ ಪರಿಹಾರಧನವನ್ನು ಪ್ರಭಾರ ಜಿಲ್ಲಾಧಿಕಾರಿಗಳಾದ ಜಿಪಂ ಸಿಇಒ ಕೆ.ನಿತೀಶ್ ಅವರು ವಿತರಿಸಿದರು.
ಗುಡೇಕೋಟೆ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಎಚ್.ದೇವಿಂದ್ರಪ್ಪ ಅವರು ಚುನಾವಣಾ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ಹಿನ್ನೆಲೆ ಅವರ ವಾರಸುದಾರರಾದ ಪತ್ನಿ ಚನ್ನಮ್ಮ ತಿಮ್ಮನಹಳ್ಳಿ ಅವರಿಗೆ 10 ಲಕ್ಷ ರೂ.ಪರಿಹಾರ ಧನವನ್ನು ವಿತರಿಸಲಾಯಿತು.
ಚುನಾವಣಾ ಸಂದರ್ಭದಲ್ಲಿದ್ದಾಗಲೇ ನಿಧನರಾದ ಕಲ್ಲಹಳ್ಳಿ ಗ್ರಾಪಂ ಪಿಡಿಒ ವೆಂಕಟಲಕ್ಷ್ಮೀ ಅವರ ವಾರಸುದಾರರಾದ ಪತಿ ಜೆ.ಬಸವರಾಜು ಮತ್ತು ಮಕ್ಕಳಿಗೆ ರೂ.15ಲಕ್ಷಗಳ ಪರಿಹಾರ ಧನವನ್ನು ಪ್ರಭಾರ ಜಿಲ್ಲಾಧಿಕಾರಿಗಳು ವಿತರಿಸಿದರು. ಇದೇ ಸಂದರ್ಭದಲ್ಲಿ ಸಾಂತ್ವಾನ ಸಹ ಹೇಳಿದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 