ಬಳ್ಳಾರಿ: ಸಾರ್ವತ್ರಿಕ ಚುನಾವಣೆ: ಮತ ಎಣಿಕೆ ಕೇಂದ್ರದ ಸುತ್ತಲೂ ನಿಷೇಧಾಜ್ಞೆ
ಲೋಕದರ್ಶನ ವರದಿ
ಬಳ್ಳಾರಿ 30: ಜಿಲ್ಲೆಯ ಸಂಡೂರು, ಹೂವಿನಹಡಗಲಿ, ಹರಪನಹಳ್ಳಿ ಪುರಸಭೆ ಹಾಗೂ ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯತಿಯ ವ್ಯಾಪ್ತಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶವೆಂದು ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಡೂರು ಪುರಸಭೆಯ ಮತ ಎಣಿಕೆಯು ಸಂಡೂರು ತಾಲೂಕು ಕಚೇರಿಯಲ್ಲಿ, ಹೂವಿನಹಡಗಲಿ ಪುರಸಭೆ ಮತ ಎಣಿಕೆಯು ತಾಲೂಕು ಕಚೇರಿಯಲ್ಲಿ, ಹರಪನಹಳ್ಳಿ ಪುರಸಭೆ ಮತ ಎಣಿಕೆಯು ಹರಪನಹಳ್ಳಿಯ ಶ್ರೀತರಳಬಾಳು (ಆಂಗ್ಲ ಮಾಧ್ಯಮ) ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಮಲಾಪುರ ಪಟ್ಟಣ ಪಂಚಾಯತಿಯ ಮತ ಎಣಿಕೆಯು ಹೊಸಪೇಟೆಯ ಚಿತ್ತವಾಡ್ಗಿಯ ಪಿ.ಬಿ.ಎಸ್ ಅಂಡ್ ಸನ್ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ದಂಡ ಪಕ್ರಿಯೆ ಸಂಹಿತೆ 1973ರ ಸೆಕ್ಷನ್ 144 ಮತ್ತು ದಂಡ ಪ್ರಕ್ರಿಯಾ ಸಂಹಿತೆ (ತಿದ್ದುಪಡಿ) 2005ರ ಸೆಕ್ಷನ್ 144 (ಎ)ರಡಿ ಮೇ 31 ರ ಬೆಳಗ್ಗೆ 6 ರಿಂದ ಜೂನ್ 1 ರ ಬೆಳಗ್ಗೆ 6 ಗಂಟೆಯವರೆಗೆ ಮತ ಎಣಿಕೆ ಕೇಂದ್ರಗಳ ಸುತ್ತಲೂ ನಿರ್ಭಂಧಿತ ಪ್ರದೇಶವಾಗಿರುತ್ತದೆ.
ಈ ಅವಧಿಯಲ್ಲಿ ಜಿಲ್ಲೆಯ ಸಂಡೂರು, ಹೂವಿನಹಡಗಲಿ, ಹರಪನಹಳ್ಳಿ, ಹೊಸಪೇಟೆ ತಾಲೂಕಿನಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ/ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವಂತಿಲ್ಲ. ಸ್ಪೋಟಕ/ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 