ಬಳ್ಳಾರಿ: ಜೂನ್ 9 ರಂದು ಎಂ.ಎಸ್.ಸುಬ್ಬುಲಕ್ಷ್ಮಿ ಮೊಮ್ಮಗಳಿಂದ ಸಂಗೀತ ಕಾರ್ಯಕ್ರಮ
ಲೋಕದರ್ಶನ ವರದಿ
ಬಳ್ಳಾರಿ 06:ಕರ್ನಾಟಕ ಹಾಗೂ ಹಿಂದೂಸ್ಥಾನೀ ಸಂಗೀತ ಕ್ಷೇತ್ರದ ಸರ್ವಶ್ರೇಷ್ಠ ಸಂಗೀತ ವಿದೂಷಿ, ಭಾರತ ರತ್ನ ಎಂಎಸ್ ಸುಬ್ಬುಲಕ್ಷ್ಮಿ ಅವರ ಮೊಮ್ಮಗಳು ಮತ್ತು ಖ್ಯಾತ ಸಂಗೀತಗಾರ್ತಿ ಕುಮಾರಿ ಎಸ್.ಸೌಂದರ್ಯ ಅವರಿಂದ ಜೂನ್ 9ರಂದು ಬಳ್ಳಾರಿಯಲ್ಲಿ ಪ್ರಭಾತ ಸಂಗೀತಂ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಿಸಿಲ ನಾಡಿನ ಜನತೆಗೆ ಕಳೆದ ಹಲವು ವರ್ಷಗಳಿಂದ ವೈವಿಧ್ಯಮಯ ಸಂಗೀತ ಕಾರ್ಯಕ್ರಮಗಳ ಮೂಲಕ ಸಂಗೀತಾಸಕ್ತರನ್ನು ಸಂತೃಪ್ತಿಗೊಳಿಸುತ್ತಿರುವ ಬಳ್ಳಾರಿ ಮ್ಯೂಸಿಕ್ ಕ್ಲಬ್ ಇವರು ಈ ಕಾರ್ಯಕ್ರಮ ಆಯೋಜಿಸಿದ್ದಾರೆ. ಅನಂತಪುರ(ಡಾ.ರಾಜ್ಕುಮಾರ್) ರಸ್ತೆಯಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಬೆಳಿಗ್ಗೆ 8 ರಿಂದ 9-30ರ ಸಮಯದಲ್ಲಿ ಈ ಪ್ರಭಾತ ಸಂಗೀತಂ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾನುವಾರದ ಸೂರ್ಯೋದಯದ ಸಮಯದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಡಾ.ರಾಧಾ ವಿಶ್ವನಾಥನ್ ಮತ್ತು ಸಂಗೀತ ವಿದೂಷಿ ನೀಲಾ ರಾಮಗೋಪಾಲ್ ಅವರ ಮೊಮ್ಮಗಳೂ ಆಗಿರುವ ಎಸ್.ಸೌಂದರ್ಯ ಅವರು ದೇವರ ನಾಮಗಳ ಮೂಲಕ ಸಂಗೀತಾರಾಧನೆ ಮಾಡಲಿದ್ದಾರೆ.
ಈಗಾಗಲೇ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಷ್ಟ್ರದ ನಾನಾ ಕಡೆಗೆ ತಮ್ಮ ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿರುವ ಎಸ್.ಸೌಂದರ್ಯ ಬಳ್ಳಾರಿಗರನ್ನೂ ಸಹ ಸಂಗೀತದ ಸಾಗರದಲ್ಲಿ ತೇಲಿಸಲಿದ್ದಾರೆ. ಸರ್ವ ಸಂಗೀತಾಸಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಬಳ್ಳಾರಿ ಮ್ಯೂಸಿಕ್ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ಜೆ.ಗುಪ್ತಾ ಮತ್ತು ಕಾರ್ಯದರ್ಶಿ ಸಂಧ್ಯಾರಾವ್ ಕೋರಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 