ಬಳ್ಳಾರಿ: ಕುಡಿಯುವ ನೀರನ ಶುದ್ಧೀಕರಣಕ್ಕೆ ಮನವಿ
ಲೋಕದರ್ಶನ ವರದಿ
ಬಳ್ಳಾರಿ 17: ನಗರದಲ್ಲಿ ಕುಡಿಯುವ ನೀರು ಬಹಳಷ್ಟು ಕಪ್ಪು ಬಣ್ಣದಲ್ಲಿ ಸರಬರಾಜು ಆಗುತ್ತಿದೆ.
ಇಂತಹ ನೀರನ್ನು ದಿನನಿತ್ಯ ಬಳಸುವಂತಹ ಸಾರ್ವಜನಿಕರಿಗೆ ಅನೇಕ ಚರ್ಮ ರೋಗಗಳು ಹಾಗೂ ಇನ್ನಿತರ ರೋಗಗಳು ಹರಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಸಾರ್ವಜನಿಕರಿಗೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದೆ. ಕಾರಣ ನೀರನ್ನು ಶುದ್ದಿಕರಣ ಮಾಡಿ, ಬ್ಲೀಚಿಂಗ್ ಪೌಡರ್ ಹಾಕುವುದರಲ್ಲಿ ಹಾಗೂ ಸ್ವಚ್ಛ ನೀರು ಸರಬರಾಜು ಮಾಡುವುದರಲ್ಲಿ ಪಾಲಿಕೆ ಹಾಗೂ ಜಲಮಂಡಳಿ ಅಧಿಕಾರಿಗಳೆಲ್ಲಾ ವಿಫಲರಾಗಿದ್ದಾರೆ. ಸಾರ್ವಜನಿಕರ ಆರೋಗ್ಯ ವಿಷಯದಲ್ಲಿ ಆಟವಾಡುವ ಹಕ್ಕು ಯಾರು ನೀಡಿದ್ದಾರೆ?
ನಗರದಲ್ಲಿರುವಂತಹ ಪ್ರತಿಯೊಬ್ಬ ವ್ಯಕ್ತಿ ದಿನನಿತ್ಯ ರೂ.30/-ಖಚರ್ು ಮಾಡಿ ಶುದ್ಧೀಕರಿಸಿದ ನೀರು ಕುಡಿಯುವುದರಿಂದ ಆರ್ಥಿಕ ನಷ್ಟವನ್ನು ತುಂಬಿಸುವಂತ ವ್ಯಕ್ತಿಗಳ್ಯಾರು? ಅಷ್ಟೇ ಅಲ್ಲದೆ ನಗರ ವಾಸಿಗಳು ನಿಷ್ಠಾವಂತರಾಗಿ ಕುಡಿಯುವ ನೀರಿಗೆ ತೆರಿಗೆ ನೀಡುವ ಅವಶ್ಯಕತೆ ಏನಿದೆ.
ದಯಮಾಡಿ ಎಲ್ಲಾ ವಿಷಯಗಳನ್ನು ಪರಿಗಣಿಸಿ ಪೂರ್ತಿ ಶುದ್ಧಿಯಾಗಿಸಿ ನೀರು ಸರಬರಾಜು ಮಾಡುವಂತೆ ಕಾರ್ಯಕ್ರಮವನ್ನು ಮಾಡುವಂತೆ ಕೋರಿಕೊಳ್ಳುತ್ತೇವೆ. ಇಲ್ಲದ ಪಕ್ಷದಲ್ಲಿ ತಮ್ಮ ಕಛೇರಿ ಮುಂದೆ ಸಾರ್ವಜನಿಕರೊಂದಿಗೆ ಕೂಡಿ ಮುಷ್ಕರ ಮಾಡಲು ಸಿದ್ದರಾಗಿದ್ದೇವೆ ಎಂದರು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 