ಬಳ್ಳಾರಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪದನಾಮೀಕರಿಸಲು ಮನವಿ
ಬಳ್ಳಾರಿ 02: ಉಲ್ಲೇಖದನ್ವಯ ತಮ್ಮಲ್ಲಿ ವಿನಂತಿಸಿಕೊಳ್ಳುವುದೇನಂದರೆ 1 ರಿಂದ 7ನೇ ತರಗತಿಗೆ ನೇಮಕವಾದ ನಾವುಗಳು 2005 ರಿಂದ 8ನೇ ತರಗತಿ ಪ್ರಾರಂಭಿಸಿದಾಗಿನಿಂದಲೂ 6-8ನೇ ತರಗತಿಗಳನ್ನು ಸೇವೆಯಲ್ಲಿರುವ ಪದವೀಧರ ಶಿಕ್ಷಕರು ಬೋಧಿಸುತ್ತಿದ್ದೇವೆ.
ರಾಜ್ಯದಲ್ಲಿ 82 ಸಾವಿರಕ್ಕಿಂತ ಅಧಿಕ ಪದವಿ ಪಡೆದ ಅನುಭವಿ ಶಿಕ್ಷಕರು 6-8ನೇ ತರಗತಿಗಳನ್ನು ಕಳೆದ 14 ವರ್ಷಗಳಿಂದ ಬೋಧಿಸುತ್ತಿದ್ದರೂ ಕೂಡ ಅವರನ್ನು ಮುಂಬಡ್ತಿಗೆ ಪರಿಗಣಿಸದೇ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು (6-8) ಹುದ್ದೆಗಳನ್ನು 2 ಬಾರಿ ನೇರ ನೇಮಕ ಮಾಡಿ ಈಗ ಮತ್ತೆ 3ನೇ ಬಾರಿ ನೇರ ನೇಮಕ ನಡೆಯುತ್ತಿದೆ.
ಈ ಬಗ್ಗೆ ಇಲಾಖೆ ಮುಖ್ಯಸ್ಥರು ಮತ್ತು ಮಾನ್ಯ ಸಚಿವರನ್ನು ಕೂಡ ಕಂಡು ಮನವರಿಕೆ ಮಾಡಿದೆ. ಅಲ್ಲದೇ ದಿ: 05-02-2018 ರಂದು ಪ್ರೀಡಂ ಪಾಕರ್್ನಲ್ಲಿ 25000 ಶಿಕ್ಷಕರು ಉಪವಾಸ ಸತ್ಯಾಗ್ರಹ ಮಾಡಿ ಸರಕಾರಕ್ಕೆ ಬೇಡಿಕೆ ಬಗ್ಗೆ ವಿನಂತಿಸಿ ನ್ಯಾಯಕ್ಕಾಗಿ ಒತ್ತಾಹಿಸಿದ್ದೇವೆ. ಆದರೆ ಈ ವರೆಗೂ ನ್ಯಾಯ ಸಿಕ್ಕಿರುವುದಿಲ್ಲ, ಆದ್ದರಿಂದ ನಾವು ಇಂದು ದಿನಾಂಕ 01-06-2019 ರಂದು ಮನವಿ ಪತ್ರ ಸಲ್ಲಿಸುವುದರ ಮೂಲಕ ಪ್ರಬಲವಾಗಿ ಆಗ್ರಹಿಸುವುದೇನೆಂದರೆ ಅರ್ಹ ಸೇವೆಯಲ್ಲಿರುವ ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಪದವೀಧರ ಶಿಕ್ಷಕರು (6-8) ಎಂದು ಪರಿಗಣಿಸಿ ಇಲ್ಲವಾದಲ್ಲಿ ನಾವು ನಮ್ಮ ಹೊಸ ವೃಂದ ನಿಯಮಗಳಂತೆ 1-5ನೇ ತರಗತಿಗಳನ್ನು ಮಾತ್ರ ದಿನಾಂಕ 01-07-2019 ರಿಂದ ಬೋಧಿಸುತ್ತೇವೆ. 6-8 ನೇ ತರಗತಿಗಳ ಬೋಧನೆಯನ್ನು ಬೇಡಿಕೆ ಈಡೇರುವರೆಗೆ ಬಹಿಷ್ಕರಿಸುತ್ತೇವೆ. ನಮಗೆ ನ್ಯಾಯ ದೊರೆಯುವಂತೆ ನಮ್ಮ ಬೇಡಿಕೆಯನ್ನು ಈಡೇರಿಸಲು ಸರಕಾರಕ್ಕೆ ಶಿಫಾರಸ್ಸು ಮಾಡಲು ಮನವಿ ಸಲ್ಲಿಸಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 