ಬಳ್ಳಾರಿ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ: ರಾಮ್ ಪ್ರಸಾತ್
ಲೋಕದರ್ಶನ ವರದಿ
ಬಳ್ಳಾರಿ 24: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತಿಕ ಚುನಾವಣೆ-2019ರ ಹಿನ್ನೆಲೆಯಲ್ಲಿ ಮೇ 31 ರಂದು ಜಿಲ್ಲೆಯ ಸಂಡೂರು, ಹೆಚ್.ಹಡಗಲಿ, ಹರಪನಹಳ್ಳಿ, ಹೊಸಪೇಟೆ ತಾಲೂಕಿನ ತಹಶೀಲ್ದಾರರ ಕಚೇರಿಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಈ ಮತ ಎಣಿಕೆ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳು ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಕಾನೂನು ಸುವ್ಯವಸ್ಥೆ ಭಂಗವಾಗುವ ಸಾಧ್ಯತೆಗಳು ಇರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇ 31 ರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆಯ ಕೇಂದ್ರದ ವ್ಯಾಪ್ತಿಯ ಸುತ್ತಲೂ ದಂಡ ಪ್ರಕಿಯಾ ಸಂಹಿತೆ 1973ರ ಸೆಕ್ಷನ್ ಕಲಂ:144ರಡಿ ನಿಷೇಧಾಜ್ಞೆ ಪ್ರದೇಶವಾಗಿರುತ್ತದೆ.
ಈ ಅವಧಿಯಲ್ಲಿ ಜಿಲ್ಲೆಯ ಸಂಡೂರು, ಹೆಚ್.ಹಡಗಲಿ, ಹರಪನಹಳ್ಳಿ, ಹೊಸಪೇಟೆ ತಾಲೂಕಿನಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ/ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ/ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮತ ಎಣಿಕೆಯ ಪ್ರದೇಶಗಳಲ್ಲಿ ಖಾಸಗಿ ವಾಹನಗಳ ತಂಗುವಿಕೆ, ಧ್ವನಿವರ್ಧಕ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ಆದೇಶ ಹೊರಡಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 