ಬಳ್ಳಾರಿ ಪತ್ರಕರ್ತರ ಗಿರಿ ಯಾದವ್ ಅವರಿಗೆ ಗೋವಾದಲ್ಲಿ ಉಮೆನ್ಸ್ ಎಕ್ಸಲೆನ್ಸಿ ಅವಾರ್ಡ್
Bellary journalist Giri Yadav receives Women's Excellence Award in Goa
ಬಳ್ಳಾರಿ 10: ಆಂಧ್ರ ಕರ್ನಾಟಕದಲ್ಲಿ ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಜನ ಮತ್ತು ಸರ್ಕಾರಿ ವಲಯಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಾ ಸಾರ್ವಜನಿಕರ ಒಳಿತಿಗಾಗಿ ಸಮಸ್ಯೆಗಳನ್ನು ಬಗೆಹರಿಸಲು ತಮ್ಮದೇ ಆದ ಶೈಲಿಯಲ್ಲಿ ಕೆಲಸ ಮಾಡಿದ ಸಾಕ್ಷಿ ರಾಷ್ಟ್ರೀಯ ತೆಲುಗು ದಿನಪತ್ರಿಕೆಯ ಗಿರಿ ಯಾದವ್ ಅವರಿಗೆ ಪ್ರಶಸ್ತಿ ದೊರಕಿದೆ. ಇವರು ಕಳೆದ 20 ವರ್ಷಗಳಿಂದ ಮಾಧ್ಯಮದಲ್ಲಿ ಕೆಲಸ ಮಾಡಿದ್ದಾರೆ . ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಗಿರಿ ಯಾದವ್ ಜನ ಚೈತನ್ಯ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ್ದಾರೆ. ಯಾದವ್ ಸಮುದಾಯದ ಬಳ್ಳಾರಿ ಜಿಲ್ಲಾ ನಿರ್ದೇಶಕರಾಗಿ ಹಾಗೂ ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಧ್ವನಿ ಸಂಘ ಬಳ್ಳಾರಿ ಜಿಲ್ಲಾ ಮಾಜಿ ಅಧ್ಯಕ್ಷರಾಗಿ ಗಿರಿ ಯಾದವ್ ಸೇವೆ ಸಲ್ಲಿಸಿದ್ದಾರೆ. ಗೋವಾದಲ್ಲಿ ನಡೆದಿರುವ ವೇ ಫೌಂಡೇಶನ್ ಕಾರ್ಯಕ್ರಮದಲ್ಲಿ ಉಮೆನ್ಸ್ ಎಕ್ಸಲೆನ್ಸಿ ಅವಾರ್ಡ್ ನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ ವೇ ಫೌಂಡೇಶನ್ ವೆಂಕಯ್ಯ, ಬಿಸಿ ಚೈತನ್ಯ ಸಮಿತಿ ರಾಷ್ಟ್ರೀಯ ಅಧ್ಯಕ್ಷರು ಬಿ ಸಿ ರಮಣ, ಯಮದೇನೂರು ಡಾಕ್ಟರ್ ಚಂದ್ರಶೇಖರ್, ವುಮೆನ್ ರೈಟ್ಸ್ ಗೋಪಾಲ್, ಪತ್ರಕರ್ತರು ಅಸ್ಲಾಂ ಭಾಷಾ, ಶಾನ್ ಬಾಬು ಇನ್ನ ಇತರರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 