ಬಳ್ಳಾರಿ ಪತ್ರಕರ್ತರ ಗಿರಿ ಯಾದವ್ ಅವರಿಗೆ ಗೋವಾದಲ್ಲಿ ಉಮೆನ್ಸ್ ಎಕ್ಸಲೆನ್ಸಿ ಅವಾರ್ಡ್
Bellary journalist Giri Yadav receives Women's Excellence Award in Goa
ಬಳ್ಳಾರಿ 10: ಆಂಧ್ರ ಕರ್ನಾಟಕದಲ್ಲಿ ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಜನ ಮತ್ತು ಸರ್ಕಾರಿ ವಲಯಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಾ ಸಾರ್ವಜನಿಕರ ಒಳಿತಿಗಾಗಿ ಸಮಸ್ಯೆಗಳನ್ನು ಬಗೆಹರಿಸಲು ತಮ್ಮದೇ ಆದ ಶೈಲಿಯಲ್ಲಿ ಕೆಲಸ ಮಾಡಿದ ಸಾಕ್ಷಿ ರಾಷ್ಟ್ರೀಯ ತೆಲುಗು ದಿನಪತ್ರಿಕೆಯ ಗಿರಿ ಯಾದವ್ ಅವರಿಗೆ ಪ್ರಶಸ್ತಿ ದೊರಕಿದೆ. ಇವರು ಕಳೆದ 20 ವರ್ಷಗಳಿಂದ ಮಾಧ್ಯಮದಲ್ಲಿ ಕೆಲಸ ಮಾಡಿದ್ದಾರೆ . ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಗಿರಿ ಯಾದವ್ ಜನ ಚೈತನ್ಯ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ್ದಾರೆ. ಯಾದವ್ ಸಮುದಾಯದ ಬಳ್ಳಾರಿ ಜಿಲ್ಲಾ ನಿರ್ದೇಶಕರಾಗಿ ಹಾಗೂ ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಧ್ವನಿ ಸಂಘ ಬಳ್ಳಾರಿ ಜಿಲ್ಲಾ ಮಾಜಿ ಅಧ್ಯಕ್ಷರಾಗಿ ಗಿರಿ ಯಾದವ್ ಸೇವೆ ಸಲ್ಲಿಸಿದ್ದಾರೆ. ಗೋವಾದಲ್ಲಿ ನಡೆದಿರುವ ವೇ ಫೌಂಡೇಶನ್ ಕಾರ್ಯಕ್ರಮದಲ್ಲಿ ಉಮೆನ್ಸ್ ಎಕ್ಸಲೆನ್ಸಿ ಅವಾರ್ಡ್ ನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ ವೇ ಫೌಂಡೇಶನ್ ವೆಂಕಯ್ಯ, ಬಿಸಿ ಚೈತನ್ಯ ಸಮಿತಿ ರಾಷ್ಟ್ರೀಯ ಅಧ್ಯಕ್ಷರು ಬಿ ಸಿ ರಮಣ, ಯಮದೇನೂರು ಡಾಕ್ಟರ್ ಚಂದ್ರಶೇಖರ್, ವುಮೆನ್ ರೈಟ್ಸ್ ಗೋಪಾಲ್, ಪತ್ರಕರ್ತರು ಅಸ್ಲಾಂ ಭಾಷಾ, ಶಾನ್ ಬಾಬು ಇನ್ನ ಇತರರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 