ಜೂ.20 ರಿಂದ ಬೆಟಗೇರಿ ಜಾಗೃತ ಮಾರುತಿ ದೇವರ ಓಕುಳಿ
Betageri Jagrita Maruti Devara Okuli from June 20
ಲೋಕದರ್ಶನ ವರದಿ
ಬೆಟಗೇರಿ 18 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಜೂ.20ರಿಂದ ಜೂ.23 ರವರೆಗೆ ಜರುಗಲಿದೆ. ಜೂ.20ರಂದು ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾ ರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ.
ಜೂ.21ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 ಗಂಟೆಗೆ ನಡು ಓಕುಳಿ. ಜೂ.22 ರಂದು ಮುಂಜಾನೆ 8 ಗಂಟೆಯಿಂದ ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರೆ್ಣ ನಡೆದು, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷೀಣೆ ಬಳಿಕ ಕಡೆ ಓಕಳಿ ನಡೆಯಲಿದ್ದು, ವಿವಿಧ ಪ್ರಾಣಿಗಳ ಸೊಗಿನ ಕುಣಿತದ ಪ್ರದರ್ಶನ, ಅದೇ ದಿನ ಸಂಜೆ 8 ಗಂಟೆಗೆ ಶ್ರೀಗಳಿಗೆ, ಅನ್ನದಾನಿಗಳಿಗೆ ಸತ್ಕಾರ ಕಾರ್ಯಕ್ರಮದ ಬಳಿಕ ರಾತ್ರಿ 10.30ಕ್ಕೆ ತುಳಸಿಗೇರಿ ಜೈ ಹನುಮಾನ ನಾಟ್ಯ ಸಂಘದವರಿಂದ ಕೃಷ್ಣಪಾರಿಜಾತ ಕಲಾ ಸಂಘದವರಿಂದ ನಾಟಕ ಪ್ರದರ್ಶನ ಜರುಗಲಿದೆ.
ಮಂಗಳವಾರ ಜೂ.23ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 4 ಗಂಟೆಗೆ ಜಂಗಿ ಕುಸ್ತಿಗಳು ನಡೆದ ಬಳಿಕ ಸಂಜೆ ಮಾರುತಿ ದೇವರ ದೇವಾಲಯಕ್ಕೆ ಪಲ್ಲಕ್ಕಿ ಪ್ರರ್ದಕ್ಷಣೆ ನಡೆಯಲಿದೆ ಎಂದು ಇಲ್ಲಿಯ ಮಾರುತಿ ದೇವರ ಓಕುಳಿ ಉತ್ಸವ ಆಚರಣಾ ಸಮಿತಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 