ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ

ಶ್ರೀ ಯೋಗಿನಾರೇಯಣ  ಯತೀಂದ್ರರ ಜಯಂತಿ Birth Anniversary of Sri Yoginareyana Yatindra

ಹಾವೇರಿ 03 :     ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ  ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ಯೋಗಿನಾರೇಯಣ  ಯತೀಂದ್ರರ (ಕೈವಾರ ತಾತಯ್ಯನವರ) ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಅವರು  ಯೋಗಿನಾರೇಯಣ ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಪೂರ್ವಕವಾಗಿ ನಮಿಸಿದರು.  ತಹಶೀಲ್ದಾರ ಶರಣಮ್ಮ,  ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು.