ಬಜೆಟ್ ನಲ್ಲಿ ಬಹುಸಂಖ್ಯಾತರಿಗೆ ಅನ್ಯಾಯ: ನಾಗೇಶ ಹೆಗಡ್ಯಾಳ
Budget is unfair to the majority: Nagesh Hegdyala
ಲೋಕದರ್ಶನ ವರದಿ
ಇಂಡಿ 06 : ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಬಹುಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಇಂಡಿ ತಾಲೂಕಿನ ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸನಾತನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಯಾವುದೇ ರೀತಿಯ ಅನುದಾನ ಮೀಸಲಿಟ್ಟಿಲ್ಲ, ಉತ್ತರ ಕರ್ನಾಟಕದ ಪ್ರವಾಸೋದ್ಯಮ ಹಾಗೂ ನೀರಾವರಿ ಯೋಜನೆಗಳಿಗೆ ಮಹತ್ವ ನೀಡಿಲ್ಲ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಹೇಳಿದರು.ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆದಾಯ ಕಡಿಮೆಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಕಡಿವಾಣ ಹಾಕಿ ಆರ್ಥಿಕ ಶಿಸ್ತು ಪಾಲನೆಗೆ ಬಜೆಟ್ ನಲ್ಲಿ ಒತ್ತು ನೀಡಬೇಕಿತ್ತು. ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 